July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.

ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕ ಜಯಾನಂದ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ವಲಯ ಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಸ.ಪ್ರೌ.ಶಾಲೆ ಗೇರುಕಟ್ಟೆ ಪ್ರಥಮ

Suddi Udaya

ಚಿಬಿದ್ರೆ ಪರವಾನಿಗೆ ಇಲ್ಲದೆ ಮರ ಕಡಿದು ಸಾಗಾಟಕ್ಕೆ ಯತ್ನ :ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ಮರ ಮತ್ತು ಕಟ್ಟಿಗೆಗಳ ವಶ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಬೆಳ್ತಂಗಡಿ : ವಿಪರೀತ ಮಳೆಯಾಗುತ್ತಿರುವ ಕಾರಣ ಈ ಪ್ರವಾಸಿ ತಾಣಗಳಿಗೆ ಪ್ರವೇಶ ನಿಷೇಧ

Suddi Udaya

ಉಜಿರೆ ಎಸ್‌ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya
error: Content is protected !!