30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.

ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕ ಜಯಾನಂದ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಉಜಿರೆ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮಾ ದಿನಾಚರಣೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸ್ನೇಹಮಯಿ ಕೃಷ್ಣ ವಿರುದ್ಧ ಬೆಳ್ತಂಗಡಿ ವೃತ್ತ ನಿರೀಕ್ಷಕರಿಗೆ ವೆಂಕಪ್ಪ ಕೋಟ್ಯಾನ್ ರಿಂದ ದೂರು

Suddi Udaya
error: Content is protected !!