July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

ನಾವೂರು : ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿಷ್ಣು ಸಹಸ್ರನಾಮ ಹಾಗೂ ಭಗವದ್ಗೀತೆಯ ಪಠಣ ಹಾಗೂ ತರಬೇತಿ ನೀಡುತ್ತಾ ಬಂದಿರುವ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಅಭಿವೃದ್ಧಿಗೆ ದುಡಿದ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರಿಗೆ ಊರವರು ಸೇರಿ, ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ ಅವರ ಉಪಸ್ಥಿತಿಯಲ್ಲಿ “ಧರ್ಮ ಸಾರಥಿ” ಬಿರುದನ್ನು ನೀಡಿ ಗೌರವಿಸಿದ್ದಾರೆ.

ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ ಗ್ರಾಮಸ್ಥರು ಸೇರಿ, ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರ ಧಾರ್ಮಿಕ ಸೇವೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದಾರೆ. ವೈದ್ಯ ವೃತ್ತಿಯಲ್ಲಿದ್ದರೂ, ಸಾಮಾಜಿಕ ಮತ್ತು ಧರ್ಮ ಜಾಗೃತಿ ಮೂಲಕ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರು ಮಾಡಿರುವ ಧರ್ಮಕ್ರಾಂತಿಯ ಕೆಲಸ ಗುರುತಿಸಿ ಈ ಗೌರವ ಸಲ್ಲಿಸಲಾಗಿದೆ. ಜ.31ರಂದು ನಾವೂರು ಜಾತ್ರೆಯ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಸಭಾ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ| ಪ್ರದೀಪ್ ಆಟಿಕುಕ್ಕೆ ನಾವೂರು, ಅವರ ಪತ್ನಿ ಡಾ. ಕವಿತಾ ನಾವೂರು ಹಾಗೂ ಕುಟುಂಬಕ್ಕೆ ಶ್ರೀಕೃಷ್ಣನ ಪ್ರತಿಮೆಯನ್ನು ವೀಣಾ ಬನ್ನಂಜೆ ಅವರ ಮೂಲಕ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ , ದಶಮಾನೋತ್ಸವ ಸಮತಿಯ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾದ ಪೂರಣ್ ವರ್ಮ, ಕೆ.ಎಂ.ಎಫ್.ನ ಸುಧಾಕರ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Related posts

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಬಳಂಜ ಶಾಲಾ ಕ್ರೀಡಾಂಗಣ ನವೀಕರಣ, ಎಲ್.ಕೆ.ಜಿ, ಯು.ಕೆ.ಜಿ, ರಂಗ ಮಂದಿರ ನಿರ್ಮಾಣ, ಶಾಲಾ ಕೊಠಡಿ ನವೀಕರಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 15ನೇ ಪಟ್ಟಾಭಿಷೇಕದ ವರ್ಧತ್ಯುತ್ಸವ

Suddi Udaya
error: Content is protected !!