24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಫೆ.3ರಿಂದ 7ರ ವರೆಗೆ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.

ಫೆ.3 ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ ನಡೆಯಲಿದೆ.

ಫೆ.4ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶತರುದ್ರಾಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಬಲಿ, ರಾತ್ರಿಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಫೆ.5ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ರುದ್ರಹೋಮ, ನಿತ್ಯಬಲಿ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದರ್ಶನ ಬಲಿ ಉತ್ಸವ,
ಬಟ್ಟಲು ಕಾಣಿಕೆ, ದೈವ-ದೇವರ ಭೇಟಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ. ಫೆ.೬ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ಮಹಾಪೂಜೆ, ನಿತ್ಯಬಲಿ, ಆಶ್ಲೇಷಾ ಬಲಿ, ಅನ್ನಸಂತರ್ಪಣೆ, ಸಂಜೆ ಶ್ರೀರಂಗ ಪೂಜೆ, ಸವಾರಿಬಲಿ, ರಾತ್ರಿಪೂಜೆ, ಭೂತಬಲಿ, ಕವಾಟಬಂಧನ, ಅನ್ನಸಂತರ್ಪಣೆ. ಫೆ.7ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ತುಲಾಭಾರ ಸೇವೆ, ಚೂರ್ಣೋತ್ಸವ, ನಂದಿ ಪೂಜೆ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ಅವಭೃತ ಸ್ನಾನ, ಧ್ವಜಾವರೋಹಣ, ರಾತ್ರಿಪೂಜೆ, ಮಂತ್ರಾಕ್ಷತೆ ಮತ್ತು ಸಂಪ್ರೋಕ್ಷಗಾಮಿ, ಅನ್ನಸಂತರ್ಪಣೆ ನಡೆಯಲಿದೆ. ಫೆ.4 ರಂದು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿAದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ದಿನೇಶ್ ಮೂಲ್ಯ ಕೊಂಡೆಮಾರು ತಿಳಿಸಿದ್ದಾರೆ.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಮೇಲಂತಬೆಟ್ಟು : ವಿದ್ಯುತ್ ಕೇಬಲ್ ನಲ್ಲಿ ಕಾಣಿಸಿಕೊಂಡ ಬೆಂಕಿ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿಬಿಎಸ್ ಇ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಕ್ಯಾಂಪ್ಕೊ ಸಾಂತ್ವನ ಯೋಜನೆಯಡಿ ಧನಸಹಾಯ ಹಸ್ತಾಂತರ

Suddi Udaya
error: Content is protected !!