22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇಂಡಿಯನ್ ರೆಡ್‌ಕ್ರಾಸ್ ಮಂಗಳೂರು ಸಹಯೋಗದಲ್ಲಿ ರಕ್ತದಾನ ಶಿಬಿರ ಜ.30 ರಂದು ನಡೆಯಿತು.

ರಕ್ತದಾನ ಶಿಬಿರವನ್ನು ಹೈದರಾಬಾದಿನ ಹಿರಿಯ ರೇಡಿಯಾಲಿಜಿಸ್ಟ್ ಡಾ| ಇಂದಿರಾ ಉದ್ಘಾಟಿಸಿ ಮಾತನಾಡುತ್ತಾ, ಯಾವುದೇ ಸ್ವಾರ್ಥವಿಲ್ಲದೆ, ತಾನು ಯಾರಿಗೆ ರಕ್ತದಾನ ಮಾಡುತ್ತಿದ್ದೇನೆ ಎಂಬ ಮಾಹಿತಿ ಕೂಡ ಕೇಳದೆ, ಇನ್ನೊಬ್ಬರ ಜೀವ ಉಳಿಸಬಲ್ಲ ಉದ್ದೇಶದಿಂದ ಮಾಡುವ ರಕ್ತದಾನ ದಾನಗಳಲ್ಲಿಯೇ ಶ್ರೇಷ್ಠದಾನ. ಪೂಜ್ಯರ ಮಾರ್ಗದರ್ಶನದಲ್ಲಿ ನಡೆಯುವ ಪ್ರತಿಯೊಂದು ಕಾರ್ಯಗಳು ಜನರಿಗೆ ಉಪಯುಕ್ತವಾಗಿರುತ್ತದೆ ಎಂಬುದರಲ್ಲಿ ಯಾವ ಸಂಶಯವಿಲ್ಲ. ಇದಕ್ಕೆ ಇಲ್ಲಿ ನೀಡುತ್ತಿರುವ ಉಚಿತ ಹೈಟೆಕ್ ಡಯಾಲಿಸಿಸ್ ಸೇವೆಯೇ ಸಾಕ್ಷಿ ಎಂದರು.

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರು ಮಾತನಾಡುತ್ತಾ, ಪೂಜ್ಯ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದಲ್ಲಿ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ ಇವರ ಮಾರ್ಗದರ್ಶನದಲ್ಲಿ ಅತ್ಯಂತ ಅವಶ್ಯವಾಗಿರುವ ರಕ್ತದಾನ ಶಿಬಿರವನ್ನು ಪ್ರತಿ ತಿಂಗಳು ನಮ್ಮ ಆಸ್ಪತ್ರೆಯ ವತಿಯಿಂದ ನಡೆಸುತ್ತಿದ್ದೇವೆ. ರಕ್ತದಾನದ ಬಗ್ಗೆ ಜನರಿಗೆ ಮಾಹಿತಿಯ ಕೊರತೆ ಇದೆ. ಈ ನಿಟ್ಟಿನಲ್ಲಿ ರಕ್ತದಾನದ ಜಾಗೃತಿಯ ಅವಶ್ಯಕತೆ ಇದೆ ಎಂದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ ರಕ್ತದಾನದ ಮಹತ್ವ ವಿವರಿಸುತ್ತಾ ಜೀವ ಉಳಿಸಬಲ್ಲ ರಕ್ತದಾನ ಮಾಡಿದಾಗ ಆತ ದೇವರಿಗೆ ಸಮಾನಾಗುತ್ತಾನೆ ಎಂದರು.
ಮತ್ತೋರ್ವ ಮುಖ್ಯ ಅತಿಥಿ ಹೈದಾರಾಬಾದಿನ ಹಿರಿಯ ಶಿಕ್ಷಣ ತಜ್ಞರಾದ ಪ್ರಫುಲ್ ಮಾತನಾಡಿ ರಕ್ತದಾನಕ್ಕೆ ಬೇಕಾಗಿರುವುದು ಮಾನವೀಯತೆ, ತ್ಯಾಗ ಮನೋಭಾವ ಮತ್ತು ಒಳ್ಳೆಯ ಹೃದಯ. ಧರ್ಮಸ್ಥಳದ ಸಂಸ್ಥೆಗಳು ಸೇವೆಗೆ ಹೆಸರುವಾಸಿಯಾಗಿದೆ. ರಕ್ತದಾನ ಕೂಡ ಒಂದು ಶ್ರೇಷ್ಠ ಸೇವೆಯಾಗಿದೆ ಎಂದರು.

ಪೆಥಲಾಜಿಸ್ಟ್ ಡಾ| ಮೇಘಾ ಮಾತನಾಡಿ ದಿನನಿತ್ಯ ಸಾವಿರಾರು ಮಂದಿಗೆ ರಕ್ತದ ಅವಶ್ಯಕತೆ ಇರುತ್ತದೆ. ಆದರೆ ರಕ್ತದಾನ ಮಾಡುವವರ ಸಂಖ್ಯೆ ಕೇವಲ 1 ರಿಂದ 2 ಶೇಕಡಾ ಮಾತ್ರ. ರಕ್ತದಾನ ಮಾಡುವುದರಿಂದ ರಕ್ತದಲ್ಲಿ ಕೊಲೆಸ್ಟ್ರಾಲ್ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದರು.


ಇಂಡಿಯನ್ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕಿನ ಟೆಕ್ನಿಕಲ್ ಸೂಪರ್‌ವೈಸರ್ ಮರಿಯ ಆರತಿ ಮಾತನಾಡಿ, ಯಾರೆಲ್ಲ ರಕ್ತದಾನ ಮಾಡಬಹುದು ಎಂದು ವಿವರಿಸುತ್ತಾ, ಹೆಚ್‌ಐವಿ, ಹೆಪಟೈಟೀಸ್ ಮೊದಲಾದ ಸೋಂಕು ಇಲ್ಲದವರು, 12.5 ಹಿಮೋಗ್ಲೋಬಿನ್ ಮಟ್ಟ ಇರುವವರು ರಕ್ತದಾನ ಮಾಡಬಹುದು. ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ರಕ್ತದಾನ ಶಿಬಿರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ಆಸ್ಪತ್ರೆಯ ಸಹಕಾರದಲ್ಲಿ ಹಲವಾರು ರಕ್ತದಾನ ಶಿಬರವನ್ನು ನಡೆಸಲಾಗುತ್ತದೆ ಎಂದರು.
ಸ್ಟೋರ್ ಇನ್‌ಚಾರ್ಜ್ ಜಗನ್ನಾಥ ಎಂ. ಕಾರ್ಯಕ್ರಮ ನಿರೂಪಿಸಿದರು. ಲ್ಯಾಬ್ ಇನ್‌ಚಾರ್ಜ್ ಮೀನಾಕ್ಷಿ ಸಹಕರಿಸಿದರು.

Related posts

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಫೆ.1-5: ಶ್ರೀ ಉಮಾಮಹೇಶ್ವರ ದೇವಸ್ಥಾನ ಆಲಡೆ ಕ್ಷೇತ್ರ ಮರೋಡಿಯಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಭಾರತ -ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್: ಭಾರತದ ಗೆಲುವಿಗಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya
error: Content is protected !!