37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.

ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕ ಜಯಾನಂದ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ಅ.3: ಮುಂಡಾಜೆ ಮೂರ್ತಿಲ್ಲಾಯ ಭಕ್ತವೃಂದದಿಂದ ಬಿರ್ದ್‌ದ ಪಿಲಿಗೊಬ್ಬು

Suddi Udaya

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

Suddi Udaya

ಹೈದರಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya
error: Content is protected !!