22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

ನಾವೂರು : ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿಷ್ಣು ಸಹಸ್ರನಾಮ ಹಾಗೂ ಭಗವದ್ಗೀತೆಯ ಪಠಣ ಹಾಗೂ ತರಬೇತಿ ನೀಡುತ್ತಾ ಬಂದಿರುವ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಅಭಿವೃದ್ಧಿಗೆ ದುಡಿದ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರಿಗೆ ಊರವರು ಸೇರಿ, ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ ಅವರ ಉಪಸ್ಥಿತಿಯಲ್ಲಿ “ಧರ್ಮ ಸಾರಥಿ” ಬಿರುದನ್ನು ನೀಡಿ ಗೌರವಿಸಿದ್ದಾರೆ.

ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ ಗ್ರಾಮಸ್ಥರು ಸೇರಿ, ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರ ಧಾರ್ಮಿಕ ಸೇವೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದಾರೆ. ವೈದ್ಯ ವೃತ್ತಿಯಲ್ಲಿದ್ದರೂ, ಸಾಮಾಜಿಕ ಮತ್ತು ಧರ್ಮ ಜಾಗೃತಿ ಮೂಲಕ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರು ಮಾಡಿರುವ ಧರ್ಮಕ್ರಾಂತಿಯ ಕೆಲಸ ಗುರುತಿಸಿ ಈ ಗೌರವ ಸಲ್ಲಿಸಲಾಗಿದೆ. ಜ.31ರಂದು ನಾವೂರು ಜಾತ್ರೆಯ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಸಭಾ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ| ಪ್ರದೀಪ್ ಆಟಿಕುಕ್ಕೆ ನಾವೂರು, ಅವರ ಪತ್ನಿ ಡಾ. ಕವಿತಾ ನಾವೂರು ಹಾಗೂ ಕುಟುಂಬಕ್ಕೆ ಶ್ರೀಕೃಷ್ಣನ ಪ್ರತಿಮೆಯನ್ನು ವೀಣಾ ಬನ್ನಂಜೆ ಅವರ ಮೂಲಕ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ , ದಶಮಾನೋತ್ಸವ ಸಮತಿಯ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾದ ಪೂರಣ್ ವರ್ಮ, ಕೆ.ಎಂ.ಎಫ್.ನ ಸುಧಾಕರ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಮುಂಡಾಜೆಯ ಕವಯತ್ರಿ ಪದ್ಮಾ ಪಿ.ಬೇಡೇಕರ್ ರವರ ದರ್ಪಣ ಕವನ ಸಂಕಲನ ಬಿಡುಗಡೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ವಲಯ ಅಧ್ಯಕ್ಷರ ಭೇಟಿ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಮೊಗ್ರು: ಲಕ್ಷ್ಮಿ ನಾರಾಯಣ ಭಜನಾ ಮಂದಿರ ಹಾಗೂ ಎಲ್.ಎನ್. ಫ್ರೆಂಡ್ಸ್ ಊಂತನಾಜೆ ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ – ಎಲ್. ಎನ್. ಟ್ರೋಫಿ -2024

Suddi Udaya

ವಾಣಿ ಕಾಲೇಜು: ಎನ್ಎಸ್ಎಸ್ ವಾರ್ಷಿಕ ದೈನಂದಿನ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya
error: Content is protected !!