22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

ನಾವೂರು : ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿಷ್ಣು ಸಹಸ್ರನಾಮ ಹಾಗೂ ಭಗವದ್ಗೀತೆಯ ಪಠಣ ಹಾಗೂ ತರಬೇತಿ ನೀಡುತ್ತಾ ಬಂದಿರುವ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಅಭಿವೃದ್ಧಿಗೆ ದುಡಿದ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರಿಗೆ ಊರವರು ಸೇರಿ, ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ ಅವರ ಉಪಸ್ಥಿತಿಯಲ್ಲಿ “ಧರ್ಮ ಸಾರಥಿ” ಬಿರುದನ್ನು ನೀಡಿ ಗೌರವಿಸಿದ್ದಾರೆ.

ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ ಗ್ರಾಮಸ್ಥರು ಸೇರಿ, ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರ ಧಾರ್ಮಿಕ ಸೇವೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದಾರೆ. ವೈದ್ಯ ವೃತ್ತಿಯಲ್ಲಿದ್ದರೂ, ಸಾಮಾಜಿಕ ಮತ್ತು ಧರ್ಮ ಜಾಗೃತಿ ಮೂಲಕ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರು ಮಾಡಿರುವ ಧರ್ಮಕ್ರಾಂತಿಯ ಕೆಲಸ ಗುರುತಿಸಿ ಈ ಗೌರವ ಸಲ್ಲಿಸಲಾಗಿದೆ. ಜ.31ರಂದು ನಾವೂರು ಜಾತ್ರೆಯ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಸಭಾ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ| ಪ್ರದೀಪ್ ಆಟಿಕುಕ್ಕೆ ನಾವೂರು, ಅವರ ಪತ್ನಿ ಡಾ. ಕವಿತಾ ನಾವೂರು ಹಾಗೂ ಕುಟುಂಬಕ್ಕೆ ಶ್ರೀಕೃಷ್ಣನ ಪ್ರತಿಮೆಯನ್ನು ವೀಣಾ ಬನ್ನಂಜೆ ಅವರ ಮೂಲಕ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ , ದಶಮಾನೋತ್ಸವ ಸಮತಿಯ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾದ ಪೂರಣ್ ವರ್ಮ, ಕೆ.ಎಂ.ಎಫ್.ನ ಸುಧಾಕರ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Related posts

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಲಾಯಿಲ : ರಸ್ತೆಗಳ ಬದಿಯಲ್ಲಿರುವ ಚರಂಡಿಗಳ ಹೂಳೆತ್ತುವಂತೆ ಮತ್ತು ಗಿಡ ಗಂಟಿಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಂದ ಗ್ರಾ.ಪಂ.ಗೆ ಮನವಿ

Suddi Udaya

ಕಲ್ಮಂಜ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನದಲ್ಲಿ ವಿಭಾಗಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಸೆ.17: ನಾರಾವಿ ಸಂತ ಅಂತೋನಿ ಪದವಿ ಕಾಲೇಜು ಎನ್ ಎಸ್ ಎಸ್ ವತಿಯಿಂದ ಉಚಿತ ಫಿಸಿಯೋಥೆರಪಿ ಹಾಗೂ ಹೊಮಿಯೋಪತಿಕ್ ತಪಾಸಣಾ ಶಿಬಿರ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!