September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಫೆ.3ರಿಂದ 7ರ ವರೆಗೆ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.

ಫೆ.3 ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ ನಡೆಯಲಿದೆ.

ಫೆ.4ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶತರುದ್ರಾಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಬಲಿ, ರಾತ್ರಿಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಫೆ.5ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ರುದ್ರಹೋಮ, ನಿತ್ಯಬಲಿ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದರ್ಶನ ಬಲಿ ಉತ್ಸವ,
ಬಟ್ಟಲು ಕಾಣಿಕೆ, ದೈವ-ದೇವರ ಭೇಟಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ. ಫೆ.೬ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ಮಹಾಪೂಜೆ, ನಿತ್ಯಬಲಿ, ಆಶ್ಲೇಷಾ ಬಲಿ, ಅನ್ನಸಂತರ್ಪಣೆ, ಸಂಜೆ ಶ್ರೀರಂಗ ಪೂಜೆ, ಸವಾರಿಬಲಿ, ರಾತ್ರಿಪೂಜೆ, ಭೂತಬಲಿ, ಕವಾಟಬಂಧನ, ಅನ್ನಸಂತರ್ಪಣೆ. ಫೆ.7ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ತುಲಾಭಾರ ಸೇವೆ, ಚೂರ್ಣೋತ್ಸವ, ನಂದಿ ಪೂಜೆ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ಅವಭೃತ ಸ್ನಾನ, ಧ್ವಜಾವರೋಹಣ, ರಾತ್ರಿಪೂಜೆ, ಮಂತ್ರಾಕ್ಷತೆ ಮತ್ತು ಸಂಪ್ರೋಕ್ಷಗಾಮಿ, ಅನ್ನಸಂತರ್ಪಣೆ ನಡೆಯಲಿದೆ. ಫೆ.4 ರಂದು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿAದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ದಿನೇಶ್ ಮೂಲ್ಯ ಕೊಂಡೆಮಾರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya

ಕಪುಚಿನ್ ಕೃಷಿಕಾ ಸೇವಾ ಕೇಂದ್ರ ಮತ್ತು ವಿಮುಕ್ತಿ ಸ್ವ ಸಹಾಯ ಸಂಘಗಳ ವತಿಯಿಂದ ವಿದ್ಯಾಸ್ನೇಹಿ ಬಡ್ಡಿರಹಿತ ಶಿಕ್ಷಣ ಸಾಲ ವಿತರಣೆ

Suddi Udaya

ಮಚ್ಚಿನ ಶ್ರೀ ವಿದ್ಯಾಸಾಗರ ಶಾಲೆಯಲ್ಲಿ ಮಕ್ಕಳ ಆಹಾರ ಮೇಳ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಶ್ರೀ ಧ. ಮ. ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!