July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು
ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನಂ 64/14 ರಲ್ಲಿ 4.31 ಎಕ್ರೆ ಸರಕಾರಿ ಜಾಮೀನಿನಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನ ನಿರ್ಮಾಣ ಮಾಡಿರುವ ಬಗ್ಗೆ ಹರಿಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಕ್ತ ದಾಖಲೆಗಳ ಬಗ್ಗೆ ಕೆ.ಜಯವರ್ಮ ರಾಜ ಬಲ್ಲಾಳ್ ಎಂಬವರಿಗೆ ನೋಟಿಸ್ ಜಾರಿ ಮಾಡಿದ್ದರು.‌

ಈ ಬಗ್ಗೆ ಸಭಾಭವನದ ಪಹಣಿ ಪತ್ರವನ್ನು ಪಟ್ಟಣ ಪಂಚಾಯತ್ ಗೆ ನೀಡಿದಾಗ ಅದರಲ್ಲಿ ಸಭಾಭವನ ಸರಕಾರ ಎಂದು ನಮೂದು ಮಾಡಿರುವುದು ಕಂಡು ಬಂದಿದೆ. ಇದರಿಂದ ಸಭಾಭವನಕ್ಕೆ ನೀಡಿದ ಉದ್ದಿಮೆ ಪರವಾನಿಗೆಯನ್ನು ಜ.29 ರಂದು ಪಟ್ಟಣ ಪಂಚಾಯತ್ ರದ್ದು ಪಡಿಸಿದೆ.
ಮುಂದೆ ಈ ಕಿನ್ಯಮ್ಮ ಸಭಾಭವನದ ಕಟ್ಟಡದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನೋಟಿಸ್ ನಲ್ಲಿ ಸೂಚನೆ ನೀಡಿದೆ.

Related posts

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya
error: Content is protected !!