July 23, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

ಬೆಳ್ತಂಗಡಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಳ್ತಂಗಡಿ ಗುರುಸಾನ್ನಿಧ್ಯ ಸಭಾಂಗಣದಲ್ಲಿ ಶ‌ನಿವಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಪತ್ರಕರ್ತರು ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಬೇಕಾಗಿದೆ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಪತ್ರಕರ್ತರು ಶ್ರಮಿಸಬೇಕು ಎಂದ ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನ ಖರೀದಿಗೆ ಶಾಸಕರ ನಿಧಿಯಿಂದ ರೂ 20 ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು. ಅಲ್ಲದೆ ಕೇಂದ್ರ ಸರ್ಕಾರದಿಂದ ಜಾರಿಯಾದ ಅಂಚೆ ವಿಮಾ ಯೋಜನೆಯಲ್ಲಿ ತಾಲೂಕಿನ ಪತ್ರಕತ೯ರಿಗೆ ವಿಮೆ ಮಾಡಲು ಕಂತಿನ ಹಣವನ್ನು ವೈಯಕ್ತಿಕ ನೆಲೆಯಲ್ಲಿ ನೀಡುವುದಾಗಿ ಭರವಸೆಯಿತ್ತರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಬಿ.ಎನ್. ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಪ್ರತಿ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸರ್ಕಾರದ ಸೌಲಭ್ಯಗಳನ್ನು ಬಡ ಜನರಿಗೆ ಒದಗಿಸುವಲ್ಲಿ ಪತ್ರಕತ೯ರ ಸಂಘ ಈ ಬಾರಿಯೂ ಕಾಯ೯ಕ್ರಮ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ತುಕಾರಾಮ ಮಾತನಾಡಿ ಸಂಘದ ನೂತನ ಯೋಜನೆಯನ್ನು ಪ್ರಕಟಿಸಿದರು.

ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ, ಜಿಲ್ಲಾ ಕಾಯ೯ಕಾರಿ ಸಮಿತಿ ಸದಸ್ಯ ಭುವನೇಶ್, ನೂತನ ಕಾರ್ಯದರ್ಶಿ ಮನೋಹರ ಬಳಂಜ, ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಉಪಸ್ಥಿತರಿದ್ದರು. ಸಂಘದ ಸದಸ್ಯ ಬಿ.ಎಸ್ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಚುಶ್ರೀ ಸಂದೇಶ ವಾಚಿಸಿದರು.

ಸಂತೋಷ್ ಪಿ.ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯದರ್ಶಿ ಮನೋಹರ ಬಳಂಜ ಧನ್ಯವಾದವಿತ್ತರು.ಸಂಘದ ಪದಾಧಿಕಾರಿಗಳು, ಸದಸ್ಯರು,ತಾಲೂಕಿನ ವಿವಿಧ ಸಂಘ ಸಂಸ್ಥೆಯವರು, ನಾಗರಿಕರು ಭಾಗವಹಿಸಿದ್ದರು.

Related posts

ಉಜಿರೆ ವಲೇರಿಯನ್ ಡಯಾಸ್ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮುಂಡಾಜೆ: ಪಡೀಲು ಆನಂದ ನಾಯ್ಕ ನಿಧನ

Suddi Udaya

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಕಲ್ಮಂಜ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!