July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ರುಡ್ ಸೆಟ್ ಸಂಸ್ಥೆಗೆ ಭೇಟಿ

ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಗೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಬೆಂಗಳೂರು ಇದರ ಮುಖ್ಯ ಕಾರ್ಯಾಚರಣಾ ಅಧಿಕಾರಿ (ಕೌಶಲ್ಯ) ಕಾತ್ಯಾಯಿನಿ ದೇವಿ ಕೆ.ಎ.ಎಸ್ ಅವರು ಇಂದು ಭೇಟಿ ನೀಡಿದರು.

ಭೇಟಿಯ ಸಂದರ್ಭದಲ್ಲಿ ಸಂಸ್ಥೆಯಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಟ್ಯಾಲಿ ಹಾಗೂ ಫ್ರಿಜ್ ಮತ್ತು ಎ.ಸಿ ರಿಪೇರಿ ತರಬೇತಿಗಳನ್ನು ವೀಕ್ಷಿಸಿ, ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು. ತರಬೇತಿಯ ಗುಣಮಟ್ಟ, ಲಭ್ಯವಿರುವ ಸೌಲಭ್ಯಗಳು ಹಾಗೂ ಶಿಬಿರಾರ್ಥಿಗಳ ಅಭಿಪ್ರಾಯಗಳ ಬಗ್ಗೆ ವಿಚಾರಿಸಿದರು.

ನಂತರ ಸಂಸ್ಥೆಯ ನಿರ್ದೇಶಕರು ಹಾಗೂ ಉಪನ್ಯಾಸಕರೊಂದಿಗೆ ಚರ್ಚೆ ನಡೆಸಿದ ಅವರು, ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಕೈಗೊಳ್ಳಲಾಗುತ್ತಿರುವ ವಿವಿಧ ವೃತ್ತಿ ತರಬೇತಿಗಳ ಪ್ರಗತಿ, ಗುರಿ ಸಾಧನೆ ಹಾಗೂ ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸೂಕ್ತ ಮಾರ್ಗದರ್ಶನ ನೀಡಿದರು. ಇದೇ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿಗೂ ಅವರು ಭೇಟಿ ನೀಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ನಿರ್ದೇಶಕ ಅಜೇಯ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಹಾಗೂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಹಾಗೂ ಬೆಳ್ತಂಗಡಿ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕ ಜಯಾನಂದ ಉಪಸ್ಥಿತರಿದ್ದರು.


ಬೆಳ್ತಂಗಡಿ ತಾಲೂಕಿನ ಉಜಿರೆಯ ಸಂಜೀವಿನಿ ಸಂಘದವರು ನಡೆಸುತ್ತಿರುವ ‘ಅಕ್ಕ ಹೋಟೆಲ್’ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಕಾತ್ಯಾಯಿನಿ ದೇವಿ ಅವರು, ಮಾರುಕಟ್ಟೆ ವ್ಯವಸ್ಥೆಯ ಅಭಿವೃದ್ಧಿ, ನಿರ್ವಹಣೆ ಹಾಗೂ ವಿಸ್ತರಣೆಯ ಕುರಿತು ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿ

Suddi Udaya

ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ ಗೆ ಹೈಕೋರ್ಟ್ ತಡೆ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya

ನಾವೂರು ರಿಕ್ಷಾ ನಿಲ್ದಾಣ ಎದುರು ಅಳವಡಿಸಿದ ಇಂಟರ್ ಲಾಕ್ ಹಾಳಾಗದಂತೆ ಅಡ್ಡವಾಗಿ ಇಟ್ಟ ಅಡಿಕೆ ಮರ: ತೆರವುಗೊಳಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!