23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

ನಾವೂರು : ನಾವೂರು ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕಳೆದ 10 ವರ್ಷಗಳಿಂದ ಸತತವಾಗಿ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ವಿಷ್ಣು ಸಹಸ್ರನಾಮ ಹಾಗೂ ಭಗವದ್ಗೀತೆಯ ಪಠಣ ಹಾಗೂ ತರಬೇತಿ ನೀಡುತ್ತಾ ಬಂದಿರುವ ಹಾಗೂ ಗೋಪಾಲಕೃಷ್ಣ ದೇವಸ್ಥಾನದ ಅಭಿವೃದ್ಧಿಗೆ ದುಡಿದ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರಿಗೆ ಊರವರು ಸೇರಿ, ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ ಅವರ ಉಪಸ್ಥಿತಿಯಲ್ಲಿ “ಧರ್ಮ ಸಾರಥಿ” ಬಿರುದನ್ನು ನೀಡಿ ಗೌರವಿಸಿದ್ದಾರೆ.

ಶಶಿಧರ ಶೆಟ್ಟಿ ಅವರ ಮುಂದಾಳತ್ವದಲ್ಲಿ ಗ್ರಾಮಸ್ಥರು ಸೇರಿ, ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರ ಧಾರ್ಮಿಕ ಸೇವೆಯನ್ನು ಗುರುತಿಸಿ ಗೌರವ ಸನ್ಮಾನ ಮಾಡಿದ್ದಾರೆ. ವೈದ್ಯ ವೃತ್ತಿಯಲ್ಲಿದ್ದರೂ, ಸಾಮಾಜಿಕ ಮತ್ತು ಧರ್ಮ ಜಾಗೃತಿ ಮೂಲಕ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ಅವರು ಮಾಡಿರುವ ಧರ್ಮಕ್ರಾಂತಿಯ ಕೆಲಸ ಗುರುತಿಸಿ ಈ ಗೌರವ ಸಲ್ಲಿಸಲಾಗಿದೆ. ಜ.31ರಂದು ನಾವೂರು ಜಾತ್ರೆಯ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆಯ ಸಭಾ ವೇದಿಕೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಡಾ| ಪ್ರದೀಪ್ ಆಟಿಕುಕ್ಕೆ ನಾವೂರು, ಅವರ ಪತ್ನಿ ಡಾ. ಕವಿತಾ ನಾವೂರು ಹಾಗೂ ಕುಟುಂಬಕ್ಕೆ ಶ್ರೀಕೃಷ್ಣನ ಪ್ರತಿಮೆಯನ್ನು ವೀಣಾ ಬನ್ನಂಜೆ ಅವರ ಮೂಲಕ ನೀಡಿ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಅಧ್ಯಾತ್ಮ ಸಾಧಕಿ, ಬರಹಗಾರ್ತಿ ಡಾ| ವೀಣಾ ಬನ್ನಂಜೆ , ದಶಮಾನೋತ್ಸವ ಸಮತಿಯ ಅಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ, ಕಾರ್ಯಾಧ್ಯಕ್ಷರಾದ ಪೂರಣ್ ವರ್ಮ, ಕೆ.ಎಂ.ಎಫ್.ನ ಸುಧಾಕರ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

Related posts

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

Suddi Udaya

ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬೆಳ್ತಂಗಡಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಯಾಂತ್ರೀಕೃತ ಭತ್ತ ಬೇಸಾಯದ `ಯಂತ್ರಶ್ರೀ’ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯ : ಇಬ್ಬರು ವಿದ್ಯಾರ್ಥಿಗಳು Quest Global ಸಂಸ್ಥೆಯ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!