23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.3-7: ಶ್ರೀ ಕ್ಷೇತ್ರ ಓಡೀಲು ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೋತ್ಸವವು ಫೆ.3ರಿಂದ 7ರ ವರೆಗೆ ಶ್ರೀ ಶ್ರೀಪಾದ ಪಾಂಗಣ್ಣಾಯರ ನೇತೃತ್ವದಲ್ಲಿ ವಿಜೃಂಭಣೆಯಿಂದ ನೆರವೇರಲಿದೆ.

ಫೆ.3 ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ದೇವರಿಗೆ ಪಂಚಾಮೃತ ಅಭಿಷೇಕ, ಗಣಹೋಮ, ನವ ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಮಹಾಪೂಜೆ, ನಿತ್ಯಬಲಿ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ ನಡೆಯಲಿದೆ.

ಫೆ.4ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕ, ಶತರುದ್ರಾಭಿಷೇಕ, ಅಲಂಕಾರ ಪೂಜೆ, ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಬಲಿ, ರಾತ್ರಿಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಫೆ.5ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ರುದ್ರಹೋಮ, ನಿತ್ಯಬಲಿ, ಮಹಾಪೂಜೆ, ಅನ್ನಸಂತರ್ಪಣೆ, ಸಂಜೆ ದರ್ಶನ ಬಲಿ ಉತ್ಸವ,
ಬಟ್ಟಲು ಕಾಣಿಕೆ, ದೈವ-ದೇವರ ಭೇಟಿ, ರಾತ್ರಿಪೂಜೆ, ಭೂತಬಲಿ, ಅನ್ನಸಂತರ್ಪಣೆ. ಫೆ.೬ರಂದು ಬೆಳಿಗ್ಗೆ ಅಭಿಷೇಕ, ನಿತ್ಯಪೂಜೆ, ಮಹಾಪೂಜೆ, ನಿತ್ಯಬಲಿ, ಆಶ್ಲೇಷಾ ಬಲಿ, ಅನ್ನಸಂತರ್ಪಣೆ, ಸಂಜೆ ಶ್ರೀರಂಗ ಪೂಜೆ, ಸವಾರಿಬಲಿ, ರಾತ್ರಿಪೂಜೆ, ಭೂತಬಲಿ, ಕವಾಟಬಂಧನ, ಅನ್ನಸಂತರ್ಪಣೆ. ಫೆ.7ರಂದು ಬೆಳಿಗ್ಗೆ ಕವಾಟೋದ್ಘಾಟನೆ, ಪಂಚಾಮೃತಾಭಿಷೇಕ, ರುದ್ರಾಭಿಷೇಕ, ಮಹಾಪೂಜೆ, ತುಲಾಭಾರ ಸೇವೆ, ಚೂರ್ಣೋತ್ಸವ, ನಂದಿ ಪೂಜೆ, ಅನ್ನಸಂತರ್ಪಣೆ, ಸಂಜೆ ಉತ್ಸವ ಬಲಿ, ಅವಭೃತ ಸ್ನಾನ, ಧ್ವಜಾವರೋಹಣ, ರಾತ್ರಿಪೂಜೆ, ಮಂತ್ರಾಕ್ಷತೆ ಮತ್ತು ಸಂಪ್ರೋಕ್ಷಗಾಮಿ, ಅನ್ನಸಂತರ್ಪಣೆ ನಡೆಯಲಿದೆ. ಫೆ.4 ರಂದು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿAದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿಯ ದಿನೇಶ್ ಮೂಲ್ಯ ಕೊಂಡೆಮಾರು ತಿಳಿಸಿದ್ದಾರೆ.

Related posts

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಸೀತಾರಾಮ್ ಬೆಳಾಲು ಹಾಗೂ ವಸಂತಿ ಮಚ್ಚಿನ ಆಯ್ಕೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ನೋಂದಣಿ ಕಛೇರಿ ಉದ್ಘಾಟನೆ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya
error: Content is protected !!