23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಆದೇಶ ಹಿಂಪಡೆದ ಪಟ್ಟಣ ಪಂಚಾಯತ್

ಬೆಳ್ತಂಗಡಿ: ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆಪರವಾನಿಗೆಯನ್ನು ರದ್ದು ಮಾಡಿದ ಆದೇಶವನ್ನು ಹಿಂಪಡೆದಿರುವುದಾಗಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನೋಟಿಸ್ ನಲ್ಲಿ ತಿಳಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜ್ ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನಂ 64/14 ರಲ್ಲಿ 4.31 ಎಕ್ರೆ ಸರಕಾರಿ ಜಾಮೀನಿನಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನ ನಿರ್ಮಾಣ ಮಾಡಿರುವ ಬಗ್ಗೆ ಹರಿಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಕ್ತ ದಾಖಲೆಗಳ ಬಗ್ಗೆ ಕೆ.ಜಯವರ್ಮ ರಾಜ ಬಲ್ಲಾಳ್ ಎಂಬವರಿಗೆ ನೋಟಿಸ್ ಜಾರಿ ಮಾಡಿದ್ದರು.‌

ಈ ಬಗ್ಗೆ ಸಭಾಭವನದ ಪಹಣಿ ಪತ್ರವನ್ನು ಪಟ್ಟಣ ಪಂಚಾಯತ್ ಗೆ ನೀಡಿದಾಗ ಅದರಲ್ಲಿ ಸಭಾಭವನ ಸರಕಾರ ಎಂದು ನಮೂದು ಮಾಡಿರುವುದು ಕಂಡು ಬಂದಿದೆ ಎಂದು ಸಭಾಭವನಕ್ಕೆ ನೀಡಿದ ಉದ್ದಿಮೆ ಪರವಾನಿಗೆಯನ್ನು ಪಟ್ಟಣ ಪಂಚಾಯತ್ ರದ್ದುಪಡಿಸಿದೆ ಎಂದು ಮುಖ್ಯಾಧಿಕಾರಿ ಜ.29 ರಂದುಬೆಳಿಗ್ಗೆ ಆದೇಶ ಹೊರಡಿಸಿದ್ದರು. ಆದೇಶ ಹಿಂಪಡೆದ ಪಟ್ಟಣ ಪಂಚಾಯತ್: ಅದೇ ದಿನ ಜಯವರ್ಮ ರಾಜ ಬಲ್ಲಾಳ್ ಪರ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ದಾಖಲೆ ನೀಡಲಾಗಿದೆ. ಇದನ್ನು ಪರೀಶೀಲನೆ ಮಾಡಿದ ಮುಖ್ಯಾಧಿಕಾರಿಯವರು ಈ ಹಿಂದೆ ನೀಡಿದ್ದ ಆದೇಶವನ್ನು ಹಿಂಪಡೆದಿರುವುದಾಗಿ ತಿಳಿಸಿ ಮತ್ತೊಂದು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಏನಿದೆ:ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಸ.ನಂ. 68/14ರಲ್ಲಿ 4.31 ಎಕ್ರೆ ಜಾಗವನ್ನು “ಬಸದಿ ಪರಂಬೋಕು” ಎಂಬುದಾಗಿ ಮೀಸಲಿರಿಸಿದ ಬಗ್ಗೆ ಕಂದಾಯ ಇಲಾಖೆಯ ಸರ್ವ ಮತ್ತು ಸೆಟ್ಗಮಂಟ್ ರಿಜಿಸ್ತಿಯಲ್ಲಿ ಪಟ್ಟಾದಾರನ ನಂಬ ಮತ್ತು ಹೆಸರಿನ ಕಾಲಂನಲ್ಲಿ “ಶಾಂತೇಶ್ವರ ದೇವಸ್ಥಾನದ ಪ್ರಕೃತ ಆಡಳೆದಾರರು” ಎಂದು ದಾಖಲಾಗಿದ್ದು, ಪಹಣಿಯ ಕಾಲಂ ನಂಬ್ರ 11 ರಲ್ಲಿ ನಮೂದಾಗಿರುವ ಬಗ್ಗೆ ಕಂದಾಯ ಇಲಾಖೆಯ ಸರ್ವೆ ಮತ್ತು ಸೆಟ್ಟೆಮಂಟ್ ರಿಜಿಸ್ಟ್ರಿಯ ನಕಲು ಪ್ರತಿಯನ್ನು ಒದಗಿಸಿರುತ್ತೀರಿ.ಆದುದರಿಂದ ತಮಗೆ ಈ ಕಛೇರಿಯ ದಿನಾಂಕ ಜ.29ರ ನೋಟೀಸು ಸಂಖ್ಯೆ: ಪ.ಪಂ.ಬೆ.1ಸಿ.ಆರ್/ನೋಟೀಸು/2025-26ರ ನೋಟೀಸನ್ನು ಹಿಂಪಡೆಯಲಾಗಿದೆಎಂದು ಪಟ್ಟಣ ಪಂಚಾಯತು,ಮುಖ್ಯಾಧಿಕಾರಿ ನೋಟಿಸಿನಲ್ಲಿ ತಿಳಿಸಿದ್ದಾರೆ.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಗುರುಗಳ 169 ನೇ ಜಯಂತಿ ಆಚರಣೆ, ನೂತನ ಆಡಳಿತ ಮಂಡಳಿಯ ಪದ ಪ್ರಧಾನ ಸಮಾರಂಭ

Suddi Udaya
error: Content is protected !!