ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು
ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನಂ 64/14 ರಲ್ಲಿ 4.31 ಎಕ್ರೆ ಸರಕಾರಿ ಜಾಮೀನಿನಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನ ನಿರ್ಮಾಣ ಮಾಡಿರುವ ಬಗ್ಗೆ ಹರಿಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಕ್ತ ದಾಖಲೆಗಳ ಬಗ್ಗೆ ಕೆ.ಜಯವರ್ಮ ರಾಜ ಬಲ್ಲಾಳ್ ಎಂಬವರಿಗೆ ನೋಟಿಸ್ ಜಾರಿ ಮಾಡಿದ್ದರು.
ಈ ಬಗ್ಗೆ ಸಭಾಭವನದ ಪಹಣಿ ಪತ್ರವನ್ನು ಪಟ್ಟಣ ಪಂಚಾಯತ್ ಗೆ ನೀಡಿದಾಗ ಅದರಲ್ಲಿ ಸಭಾಭವನ ಸರಕಾರ ಎಂದು ನಮೂದು ಮಾಡಿರುವುದು ಕಂಡು ಬಂದಿದೆ. ಇದರಿಂದ ಸಭಾಭವನಕ್ಕೆ ನೀಡಿದ ಉದ್ದಿಮೆ ಪರವಾನಿಗೆಯನ್ನು ಜ.29 ರಂದು ಪಟ್ಟಣ ಪಂಚಾಯತ್ ರದ್ದು ಪಡಿಸಿದೆ.
ಮುಂದೆ ಈ ಕಿನ್ಯಮ್ಮ ಸಭಾಭವನದ ಕಟ್ಟಡದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನೋಟಿಸ್ ನಲ್ಲಿ ಸೂಚನೆ ನೀಡಿದೆ.











