22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು
ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನಂ 64/14 ರಲ್ಲಿ 4.31 ಎಕ್ರೆ ಸರಕಾರಿ ಜಾಮೀನಿನಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನ ನಿರ್ಮಾಣ ಮಾಡಿರುವ ಬಗ್ಗೆ ಹರಿಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಕ್ತ ದಾಖಲೆಗಳ ಬಗ್ಗೆ ಕೆ.ಜಯವರ್ಮ ರಾಜ ಬಲ್ಲಾಳ್ ಎಂಬವರಿಗೆ ನೋಟಿಸ್ ಜಾರಿ ಮಾಡಿದ್ದರು.‌

ಈ ಬಗ್ಗೆ ಸಭಾಭವನದ ಪಹಣಿ ಪತ್ರವನ್ನು ಪಟ್ಟಣ ಪಂಚಾಯತ್ ಗೆ ನೀಡಿದಾಗ ಅದರಲ್ಲಿ ಸಭಾಭವನ ಸರಕಾರ ಎಂದು ನಮೂದು ಮಾಡಿರುವುದು ಕಂಡು ಬಂದಿದೆ. ಇದರಿಂದ ಸಭಾಭವನಕ್ಕೆ ನೀಡಿದ ಉದ್ದಿಮೆ ಪರವಾನಿಗೆಯನ್ನು ಜ.29 ರಂದು ಪಟ್ಟಣ ಪಂಚಾಯತ್ ರದ್ದು ಪಡಿಸಿದೆ.
ಮುಂದೆ ಈ ಕಿನ್ಯಮ್ಮ ಸಭಾಭವನದ ಕಟ್ಟಡದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನೋಟಿಸ್ ನಲ್ಲಿ ಸೂಚನೆ ನೀಡಿದೆ.

Related posts

“ಸಿಂಧೂರ್” ಅರ್ಥಪೂರ್ಣವಾದ ಆಪರೇಷನ್: ಪೀತಾಂಬರ ಹೆರಾಜೆ

Suddi Udaya

ಧರ್ಮಸ್ಥಳ : ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿಯಲ್ಲಿ ಲ್ಯಾಕ್ಮಿ ಶೋಕೇಸ್ ಅಳವಡಿಕೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಬೆಂಗಳೂರು: ಕೊಡಗು ಮತ್ತು ದ.ಕ. ಗೌಡ ಸಮಾಜದ ವಾರ್ಷಿಕ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ “ಕಲಾ ಐಸಿರಿ”

Suddi Udaya
error: Content is protected !!