23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

ಬೆಳ್ತಂಗಡಿ : ಸರಕಾರದ ಜಾಮೀನಿನಲ್ಲಿ ಸಭಾಭವನ ನಿರ್ಮಾಣ ಮಾಡಿರುವ ಕಾರಣದಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು
ಬೆಳ್ತಂಗಡಿ ಕೆಲ್ಲಗುತ್ತು ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟು ಪ್ರಥಮ ದರ್ಜೆ ಕಾಲೇಜು ರಸ್ತೆಯ, ಜೈನ್ ಪೇಟೆಯಲ್ಲಿರುವ ಸ.ನಂ 64/14 ರಲ್ಲಿ 4.31 ಎಕ್ರೆ ಸರಕಾರಿ ಜಾಮೀನಿನಲ್ಲಿ ಕೆಲ್ಲಗುತ್ತು ಕಿನ್ಯಮ್ಮ ಯಾನೆ ಗುಣಾವತಿ ಅಮ್ಮ ಸಭಾಭವನ ನಿರ್ಮಾಣ ಮಾಡಿರುವ ಬಗ್ಗೆ ಹರಿಪ್ರಸಾದ್ ಎಂಬವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಸೂಕ್ತ ದಾಖಲೆಗಳ ಬಗ್ಗೆ ಕೆ.ಜಯವರ್ಮ ರಾಜ ಬಲ್ಲಾಳ್ ಎಂಬವರಿಗೆ ನೋಟಿಸ್ ಜಾರಿ ಮಾಡಿದ್ದರು.‌

ಈ ಬಗ್ಗೆ ಸಭಾಭವನದ ಪಹಣಿ ಪತ್ರವನ್ನು ಪಟ್ಟಣ ಪಂಚಾಯತ್ ಗೆ ನೀಡಿದಾಗ ಅದರಲ್ಲಿ ಸಭಾಭವನ ಸರಕಾರ ಎಂದು ನಮೂದು ಮಾಡಿರುವುದು ಕಂಡು ಬಂದಿದೆ. ಇದರಿಂದ ಸಭಾಭವನಕ್ಕೆ ನೀಡಿದ ಉದ್ದಿಮೆ ಪರವಾನಿಗೆಯನ್ನು ಜ.29 ರಂದು ಪಟ್ಟಣ ಪಂಚಾಯತ್ ರದ್ದು ಪಡಿಸಿದೆ.
ಮುಂದೆ ಈ ಕಿನ್ಯಮ್ಮ ಸಭಾಭವನದ ಕಟ್ಟಡದಲ್ಲಿ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ನೋಟಿಸ್ ನಲ್ಲಿ ಸೂಚನೆ ನೀಡಿದೆ.

Related posts

ಪಣಕಜೆ ನಿವಾಸಿ ನೀಲಯ್ಯ ಮೂಲ್ಯ ಕಡ್ತ್ಯಾರ್ ನಿಧನ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ಪದಪ್ರಧಾನ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya
error: Content is protected !!