37.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

ಬೆಳ್ತಂಗಡಿ : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತಮ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬೆಳ್ತಂಗಡಿ ಗುರುಸಾನ್ನಿಧ್ಯ ಸಭಾಂಗಣದಲ್ಲಿ ಶ‌ನಿವಾರ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಪತ್ರಕರ್ತರು ಸಮಾಜವನ್ನು ತಿದ್ದುವ ಕಾರ್ಯವನ್ನು ಮಾಡಬೇಕಾಗಿದೆ ಸಮಾಜದಲ್ಲಿ ಬದಲಾವಣೆಗಳನ್ನು ತರಲು ಪತ್ರಕರ್ತರು ಶ್ರಮಿಸಬೇಕು ಎಂದ ಅವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನ ಖರೀದಿಗೆ ಶಾಸಕರ ನಿಧಿಯಿಂದ ರೂ 20 ಲಕ್ಷ ಅನುದಾನ ನೀಡುವುದಾಗಿ ತಿಳಿಸಿದರು. ಅಲ್ಲದೆ ಕೇಂದ್ರ ಸರ್ಕಾರದಿಂದ ಜಾರಿಯಾದ ಅಂಚೆ ವಿಮಾ ಯೋಜನೆಯಲ್ಲಿ ತಾಲೂಕಿನ ಪತ್ರಕತ೯ರಿಗೆ ವಿಮೆ ಮಾಡಲು ಕಂತಿನ ಹಣವನ್ನು ವೈಯಕ್ತಿಕ ನೆಲೆಯಲ್ಲಿ ನೀಡುವುದಾಗಿ ಭರವಸೆಯಿತ್ತರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಬಿ.ಎನ್. ನೂತನ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿ, ಪ್ರತಿ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸರ್ಕಾರದ ಸೌಲಭ್ಯಗಳನ್ನು ಬಡ ಜನರಿಗೆ ಒದಗಿಸುವಲ್ಲಿ ಪತ್ರಕತ೯ರ ಸಂಘ ಈ ಬಾರಿಯೂ ಕಾಯ೯ಕ್ರಮ ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ಇಂದಾಜೆ ಮಾತನಾಡಿ ನೂತನ ಪದಾಧಿಕಾರಿಗಳಿಗೆ ಶುಭ ಕೋರಿದರು. ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ತುಕಾರಾಮ ಮಾತನಾಡಿ ಸಂಘದ ನೂತನ ಯೋಜನೆಯನ್ನು ಪ್ರಕಟಿಸಿದರು.

ಮಾಜಿ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ತನ್ನ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ ಶೆಟ್ಟಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಕೆ.ಪೂಜಾರಿ, ಜಿಲ್ಲಾ ಕಾಯ೯ಕಾರಿ ಸಮಿತಿ ಸದಸ್ಯ ಭುವನೇಶ್, ನೂತನ ಕಾರ್ಯದರ್ಶಿ ಮನೋಹರ ಬಳಂಜ, ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ನೀರಾಜೆ ಉಪಸ್ಥಿತರಿದ್ದರು. ಸಂಘದ ಸದಸ್ಯ ಬಿ.ಎಸ್ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಅಚುಶ್ರೀ ಸಂದೇಶ ವಾಚಿಸಿದರು.

ಸಂತೋಷ್ ಪಿ.ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.ಕಾರ್ಯದರ್ಶಿ ಮನೋಹರ ಬಳಂಜ ಧನ್ಯವಾದವಿತ್ತರು.ಸಂಘದ ಪದಾಧಿಕಾರಿಗಳು, ಸದಸ್ಯರು,ತಾಲೂಕಿನ ವಿವಿಧ ಸಂಘ ಸಂಸ್ಥೆಯವರು, ನಾಗರಿಕರು ಭಾಗವಹಿಸಿದ್ದರು.

Related posts

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!