22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

ಬೆಳ್ತಂಗಡಿ ತಾಲೂಕು ಬಂಟರ ಸಂಘದ ಗೌರವ ಮಾರ್ಗದರ್ಶಕರಾದ ಶಶಿಧರ ಶೆಟ್ಟಿ ನವಶಕ್ತಿ, ಉದ್ಯಮಿಗಳು ಬರೋಡ ಇವರ ಮಾತೃಶ್ರೀಯವರಾದ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತವನ್ನು ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡುವುದೆಂದು ನಿರ್ಣಯಿಸಲಾಗಿತ್ತು.

ಜ.31 ಶನಿವಾರದಂದು ಪೂರ್ವಾಹ್ನ 9.30 ಕ್ಕೆ ನಾರಾವಿ ವಲಯ ಕೊಕ್ರಾಡಿ ಗ್ರಾಮದ ಶ್ರೀಮತಿ ಗಿರಿಜಾ ಶೆಟ್ಟಿ ಇವರ ನಿವೇಶನದ ಭೂಮಿ ಪೂಜೆ ನಡೆಯಿತು. ಇದರ ಶಿಲಾನ್ಯಾಸವನ್ನು ಸಂಘದ ಗೌರವ ಮಾರ್ಗದರ್ಶಕರಾದ ಶಶಿಧರ ಶೆಟ್ಟಿ ನವಶಕ್ತಿ ಇವರು ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ತಾಲೂಕು ಬಂಟರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಸುರೇಶ್ ಶೆಟ್ಟಿ ಸೂರ್ಯಶ್ರೀ, ಉದ್ಯಮಿಗಳು ಹೊಸ್ಮಾರು, ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರಾದ ಜಯಂತ ಶೆಟ್ಟಿ ಕುಂಟಿನಿ, ಎಂ. ಜಯರಾಮ ಭಂಡಾರಿ ಧರ್ಮಸ್ಥಳ ಸಂಚಾಲಕರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ತಾಲೂಕು ಬಂಟರ ಸಂಘದ ಸಂಘಟನಾ ಸಂಚಾಲಕರಾದ ರಘುರಾಮ ಶೆಟ್ಟಿ ಸಾಧನ ಉಜಿರೆ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ದಾ, ನವೀನ್ ಶೆಟ್ಟಿ ನ್ಯಾಯವಾದಿಗಳು ಕೊಕ್ರಾಡಿ, ಸಚಿನ್ ಶೆಟ್ಟಿ ಕುರೆಲ್ಯ,ನಾರಾವಿ ವಲಯ ಸಮಿತಿಯ ಕಾರ್ಯದರ್ಶಿ ಶಿವಣ್ಣ ಶೆಟ್ಟಿ, ಕೋಶಾಧಿಕಾರಿ ಜಯ ಶೆಟ್ಟಿ ಪೆರಾಡಿ, ಕೊಕ್ರಾಡಿ ಗ್ರಾಮ ಸಮಿತಿ ಅಧ್ಯಕ್ಷರಾದ ಪವನ್ ಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಕ್ಕಿ ಶೆಟ್ಟಿ ಜಂತಿಗೋಳಿ, ಹಿರಿಯರಾದ ರಾಜು ಶೆಟ್ಟಿ ಪೊನ್ನೆಮಾರಡ್ಡ ಹಾಗೂ ಬಂಟ ಸಮಾಜದ ವಲಯ ಸಮಿತಿ ಮತ್ತು ಗ್ರಾಮ ಸಮಿತಿಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಹಿರಿಯರಾದ ವಿಶ್ವನಾಥ ಶೆಟ್ಟಿಯವರು ಸ್ವಾಗತಿಸಿದರು ವಲಯ ಸಮಿತಿಯ ಅಧ್ಯಕ್ಷರಾದ ರಾಜೇಶ್ ಶೆಟ್ಟಿ ಪೆರಾಡಿ ಧನ್ಯವಾದವಿತ್ತರು ಕೊನೆಯಲ್ಲಿ “ಕಾಶಿ ಸದನ” ವಸತಿ ಯೋಜನೆಯ ಫಲಾನುಭವಿಯಾದ ಶ್ರೀಮತಿ ಗಿರಿಜಾ ಶೆಟ್ಟಿಯವರ ಮನೆಯವರು ಬಂದಿರುವ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಸರ್ಕಾರದ ಹಿಂದೂ ವಿರೋಧಿ ‘ದ್ವೇಷ ಭಾಷಣ ತಡೆ ಕಾಯಿದೆ’ ಮತ್ತು ಬಾಂಗ್ಲಾದೇಶದ ಹಿಂದೂ ಹತ್ಯಾಕಾಂಡದ ವಿರುದ್ಧ ಬೆಳ್ತಂಗಡಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಎಸ್.ಡಿ.ಎಂ. ಬಿ.ಎಡ್., ಮತ್ತು ಡಿ.ಎಡ್. ಕಾಲೇಜು ಹಾಗೂ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya
error: Content is protected !!