July 26, 2026
ಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ ಬೆಳವಣಿಗೆಯ ಮುನ್ಸೂಚನೆ ನೀಡಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಬಯೋಫಾರ್ಮ್ ಮೂಲಕ ಆರೋಗ್ಯ ಕ್ಷೇತ್ರಕ್ಕೆ 10 ಸಾವಿರ ಕೋಟಿ ಮೀಸಲು ದೇಶದ ಸ್ವಾಸ್ಥ್ಯ ಕ್ಷೇತ್ರದಲ್ಲಿ ಹೊಸ ಆಯಾಮ ನೀಡಲಿದ್ದು ಖಾದಿ ಹಾಗೂ ಕೈ ಮಗ್ಗಕ್ಕೆ ಪ್ರೋತ್ಸಾಹ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಸಾಲದ ಗ್ಯಾರಂಟಿಯೊಂದಿಗೆ ಉತ್ತೇಜನ ರಫ್ತುವಿಗೆ ಪೂರಕವಾಗಿ ಜಲಮಾರ್ಗ ನಿರ್ಮಾಣದ ಯೋಜನೆ ಎಐ ತಂತ್ರಜ್ಞಾನ (ಕೃತಕ ಬುದ್ಧಿವಂತಿಕೆ) ಅಭಿವೃದ್ಧಿಗೆ ಒತ್ತು ದೇಶದ ಕೈಗಾರಿಕಾ ಉದ್ಯೋಗ ಕ್ಷೇತ್ರದಲ್ಲಿ ಬೆಳವಣಿಗೆಯಾಗಲಿದೆ. ಬಂಡವಾಳ ವೆಚ್ಚಕ್ಕೆ ಹೆಚ್ಚು ಅನುದಾನ ಮೀಸಲಿರಿಸಿದ್ದು ಮೂಲಭೂತ ಸೌಕರ್ಯಕ್ಕೆ ಭಾರೀ ಆದ್ಯತೆ ನೀಡಿದಂತಾಗಿದೆ. ಮಹಿಳೆಯರಿಗೆ ಉದ್ಯಮಕ್ಕೆ ಪ್ರೋತ್ಸಾಹಿಸುವ ಲಕ್ ಪಥಿ ದೀದಿ ಯೋಜನೆ ಜನರ ಆಶೋತ್ತರಕ್ಕೆ ಪ್ರತಿಬಿಂಬಿತವಾದ ಬಜೆಟ್ ಆಗಿದೆ.

ವಿಕಸಿತ ಭಾರತದ ಬುನಾದಿಯ ಮೇಲೆ ಮಂಡಿಸಲ್ಪಟ್ಟ ಮುಂಗಡ ಪತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಪ್ರಾಯೋಜಕತ್ವದ ಮೆಡಿಕಲ್ ಹಬ್ ಸ್ಥಾಪನೆ ಮಾರಣಾಂತಿಕ ಕಾಯಿಲೆಗಳ ಔಷಧಿಗಳ ತೆರಿಗೆ ಕಡಿತ ಖಂಡಿತವಾಗಿಯೂ ಶ್ರೀ ಸಾಮಾನ್ಯನಿಗೆ ಪ್ರಯೋಜನಕಾರಿಯಾಗಲಿದೆ. ವಿಶೇಷವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು-ಚೆನ್ನೈ, ಬೆಂಗಳೂರು- ಹೈದರಾಬಾದ್ ಹೈಸ್ಪೀಡ್ ರೈಲು ಘೋಷಣೆ ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್ ಮಾರ್ಗ ಅಭಿವೃದ್ಧಿ ಯೋಜನೆ ಘೋಷಣೆ ಸ್ಥಳೀಯ ಆರ್ಥಿಕತೆಯ ಅಭಿವೃದ್ಧಿಗೆ ಪೂರಕವಾಗಲಿದ್ದು ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ನೀಡಿದ ಮುಂಗಡ ಪತ್ರಕ್ಕೆ ಪ್ರದಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರವರಿಗೆ ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.

Related posts

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!