23.3 C
ಪುತ್ತೂರು, ಬೆಳ್ತಂಗಡಿ
June 10, 2026
ಪ್ರಮುಖ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026-2027:ಜಾಗತಿಕ ಸವಾಲಿನ ನಡುವೆಯೂ ಜನರ ಆಶೋತ್ತರ ಪ್ರತಿಬಿಂಬಿತವಾದ ಬಜೆಟ್: ಹರೀಶ್ ಪೂಂಜ

ಬೆಳ್ತಂಗಡಿ: ಜಾಗತಿಕ ಮಾರುಕಟ್ಟೆಯ ಅನಿಶ್ಚಿತತೆ ಹಾಗೂ ಅಮೇರಿಕಾದ ತೆರಿಗೆ ಬೆದರಿಕೆಯ ಸವಾಲಿನ ನಡುವೆ ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ 2026-2027ನೇ ಕೇಂದ್ರ ಮುಂಗಡ ಪತ್ರ ಆರ್ಥಿಕ ಸ್ಥಿರತೆಯೊಂದಿಗೆ ಬೆಳವಣಿಗೆಯ ಮುನ್ಸೂಚನೆ ನೀಡಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ಬಯೋಫಾರ್ಮ್ ಮೂಲಕ ಆರೋಗ್ಯ ಕ್ಷೇತ್ರಕ್ಕೆ 10 ಸಾವಿರ ಕೋಟಿ ಮೀಸಲು ದೇಶದ ಸ್ವಾಸ್ಥ್ಯ ಕ್ಷೇತ್ರದಲ್ಲಿ ಹೊಸ ಆಯಾಮ ನೀಡಲಿದ್ದು ಖಾದಿ ಹಾಗೂ ಕೈ ಮಗ್ಗಕ್ಕೆ ಪ್ರೋತ್ಸಾಹ ಸಣ್ಣ ಮತ್ತು ಅತೀ ಸಣ್ಣ ಕೈಗಾರಿಕೆಗಳಿಗೆ ಸಾಲದ ಗ್ಯಾರಂಟಿಯೊಂದಿಗೆ ಉತ್ತೇಜನ ರಫ್ತುವಿಗೆ ಪೂರಕವಾಗಿ ಜಲಮಾರ್ಗ ನಿರ್ಮಾಣದ ಯೋಜನೆ ಎಐ ತಂತ್ರಜ್ಞಾನ (ಕೃತಕ ಬುದ್ಧಿವಂತಿಕೆ) ಅಭಿವೃದ್ಧಿಗೆ ಒತ್ತು ದೇಶದ ಕೈಗಾರಿಕಾ ಉದ್ಯೋಗ ಕ್ಷೇತ್ರದಲ್ಲಿ ಬೆಳವಣಿಗೆಯಾಗಲಿದೆ. ಬಂಡವಾಳ ವೆಚ್ಚಕ್ಕೆ ಹೆಚ್ಚು ಅನುದಾನ ಮೀಸಲಿರಿಸಿದ್ದು ಮೂಲಭೂತ ಸೌಕರ್ಯಕ್ಕೆ ಭಾರೀ ಆದ್ಯತೆ ನೀಡಿದಂತಾಗಿದೆ. ಮಹಿಳೆಯರಿಗೆ ಉದ್ಯಮಕ್ಕೆ ಪ್ರೋತ್ಸಾಹಿಸುವ ಲಕ್ ಪಥಿ ದೀದಿ ಯೋಜನೆ ಜನರ ಆಶೋತ್ತರಕ್ಕೆ ಪ್ರತಿಬಿಂಬಿತವಾದ ಬಜೆಟ್ ಆಗಿದೆ.

ವಿಕಸಿತ ಭಾರತದ ಬುನಾದಿಯ ಮೇಲೆ ಮಂಡಿಸಲ್ಪಟ್ಟ ಮುಂಗಡ ಪತ್ರದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಖಾಸಗಿ ಪ್ರಾಯೋಜಕತ್ವದ ಮೆಡಿಕಲ್ ಹಬ್ ಸ್ಥಾಪನೆ ಮಾರಣಾಂತಿಕ ಕಾಯಿಲೆಗಳ ಔಷಧಿಗಳ ತೆರಿಗೆ ಕಡಿತ ಖಂಡಿತವಾಗಿಯೂ ಶ್ರೀ ಸಾಮಾನ್ಯನಿಗೆ ಪ್ರಯೋಜನಕಾರಿಯಾಗಲಿದೆ. ವಿಶೇಷವಾಗಿ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಬೆಂಗಳೂರು-ಚೆನ್ನೈ, ಬೆಂಗಳೂರು- ಹೈದರಾಬಾದ್ ಹೈಸ್ಪೀಡ್ ರೈಲು ಘೋಷಣೆ ಕರ್ನಾಟಕ ಕರಾವಳಿಯಲ್ಲಿ ಟ್ರಕ್ಕಿಂಗ್ ಮಾರ್ಗ ಅಭಿವೃದ್ಧಿ ಯೋಜನೆ ಘೋಷಣೆ ಸ್ಥಳೀಯ ಆರ್ಥಿಕತೆಯ ಅಭಿವೃದ್ಧಿಗೆ ಪೂರಕವಾಗಲಿದ್ದು ಜನತೆಯ ಆಶೋತ್ತರಗಳಿಗೆ ಸ್ಪಂದಿಸಿ ನೀಡಿದ ಮುಂಗಡ ಪತ್ರಕ್ಕೆ ಪ್ರದಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ರವರಿಗೆ ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ಅಭಿನಂದಿಸಿದ್ದಾರೆ.

Related posts

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya
error: Content is protected !!