37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿರಾಜಕೀಯರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಲೈಫ್‌ಸ್ಟೈಲ್‌ವರದಿಸರ್ಕಾರಿ ಇಲಾಖಾ ಸುದ್ದಿ

ಕೇಂದ್ರ ಬಜೆಟ್ 2026: ವಿಕಸಿತ ಭಾರತಕ್ಕೆ ಪೂರಕವಾಗಿರುವ ಬಜೆಟ್‌: ಪ್ರತಾಪಸಿಂಹ ನಾಯಕ್

ಬೆಳ್ತಂಗಡಿ: ವಿಕಸಿತ ಭಾರತ 2047ಕ್ಕೆ ಪೂರಕವಾಗಿರುವ ದೀರ್ಘಕಾಲೀನ ದೃಷ್ಟಿಕೋನದೊಂದಿಗೆ ಬಜೆಟ್‌ನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಇದು ಐತಿಹಾಸಿಕ ಬಜೆಟ್ ಆಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಉಜಿರೆ ಇವರು ಶ್ಲಾಘಿಸಿದ್ದಾರೆ.

ಕೃಷಿಗೆ ಹೆಚ್ಚಿನ ಹಣಕಾಸನ್ನು ಮೀಸಲಿಡಲಾಗಿದೆ. ಮೂಲ ಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಮಹತ್ವ ನೀಡಲಾಗಿದೆ. ಬಡವರು, ರೈತರ ಮತ್ತು ಸಮಗ್ರ ಅಭಿವೃದ್ಧಿಯ ಪರವಾದ, ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು, ಉದ್ಯೋಗ ಸೃಷ್ಟಿ, ಮತ್ತು ದೇಶದ ಸರ್ವತೋಮುಖ ಪ್ರಗತಿಗೆ ಬಜೆಟ್ ಸಹಕಾರಿಯಾಗಿದೆ. ಯಾವುದೇ ತಾರತಮ್ಯವಿಲ್ಲದೆ ಎಲ್ಲಾ ರಾಜ್ಯಗಳಿಗೆ ಈ ಬಜೆಟ್ ಪೂರಕವಾಗಿದೆ.

ರೈತರು ಮತ್ತು ಬಡವರ ಪರವಾಗಿದ್ದು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಹಣಕಾಸು ಮೀಸಲಿಟ್ಟಿರುವುದು ಸ್ವಾಗತಾರ್ಹ. ಅಭಿವೃದ್ಧಿ ಆಧಾರಿತವಾಗಿದ್ದು ಮೂಲಸೌಕರ್ಯ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಲಾಗಿರುವುದರಿಂದ ಇದು ಸಮತೋಲಿತ ಬಜೆಟ್ ಆಗಿದೆ. ರಕ್ಷಣಾಕ್ಷೇತ್ರಕ್ಕೆ ಹಿಂದೆಂದಿಗಿಂತ ಹೆಚ್ಚಿನ ಒತ್ತು ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ ಕಾ ಸಾಥ್ ಸಬ್ ಕಾ ವಿಕಾಸ್ ಇಲ್ಲಿ ಪ್ರತಿಫಲಿತವಾಗಿದೆ ಎಂದಿದ್ದಾರೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್‌ ಟ್ಯಾಲಿ ತರಬೇತಿ

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಾಯಿಲ : ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!