August 11, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

ಬೆಳ್ತಂಗಡಿ: ಮಾ.3ರಿಂದ 11ರ ತನಕ ಜರಗಲಿರುವ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬೆಂಗಳೂರು ಸಮಿತಿಯ ಸಭೆ ಫೆ.1 ರಂದು ಬಸವನಗುಡಿಯ ಎಸ್ ಡಿಎಂ ಕಲಾ ಕಲ್ಯಾಣ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಸುರೇಂದ್ರ ಕುಮಾರ್ ಮಾತನಾಡಿ ಉಜಿರೆ ಮತ್ತು ಧರ್ಮಸ್ಥಳಕ್ಕೆ ದೈವ- ದೇವರ ಸಹಿತ ಹೆಚ್ಚಿನ ಸಂಬಂಧವಿದ್ದು ಸದಾ ಪರಸ್ಪರ ಸಹಕಾರ ನೀಡುವುದು ಸಂಪ್ರದಾಯವೂ ಆಗಿದೆ. ಬೆಂಗಳೂರಿನ ಸಮಿತಿಯಿಂದಲೂ ಬ್ರಹ್ಮಕಲಶೋತ್ಸವ ಸಂದರ್ಭ ಹೆಚ್ಚಿನ ಸಹಕಾರದ ಅಗತ್ಯವಿದೆ. ಬೆಂಗಳೂರಿನಲ್ಲಿರುವ ನಮ್ಮ ತಾಲೂಕಿನ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಸೇವೆ ಮಾಡಲು ಇದೊಂದು ಅಪೂರ್ವ ಅವಕಾಶವಾಗಿದೆ ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮದ ರೂಪು ರೇಷೆಗಳನ್ನು ಪ್ರಸ್ತುತಪಡಿಸಿ ಸಹಕಾರವನ್ನು ಕೋರಿದರು.
ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್, ವಿಜಯ ಗೋಪುರ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ, ಬೆಂಗಳೂರು ಸಮಿತಿ ಸಂಚಾಲಕ ಮಂಜುನಾಥ ಕನ್ಯಾಡಿ, ಉದ್ಯಮಿ ತ್ರಿವಿಕ್ರಮ ಸಫಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬಳಂಜ, ಸಂಚಾಲಕ ಮೋಹನ್ ಶೆಟ್ಟಿಗಾರ್,ಅಜಯ್ ಶೆಟ್ಟಿ, ಪ್ರಶಾಂತ ಜೈನ್, ಚೇತನ್ ಸಾಲಿಯಾನ್, ರಾಮಣ್ಣ ಗೌಡ, ವಿಶ್ವನಾಥ ರಸರಾಗ, ಶರತ್ ಕುಮಾರ್ ಮಂಚಿಬೆಟ್ಟು,ಪ್ರಕಾಶ್ ಕುದ್ದಣ್ಣಾಯ, ಶಿವಪ್ರಸಾದ ಸುರ್ಯ, ಕಚೇರಿ ಪ್ರಬಂಧಕ ರಾಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಸಂಧ್ಯಾ ಶ್ಯಾಮ್ ಆಚಾರ್ಯ ಸ್ವಾಗತಿಸಿದರು. ವೆಂಕಟರಮಣ ರಾವ್ ವಂದಿಸಿದರು. ರೂಪಲತಾ ಧರ್ಮಸ್ಥಳ ಹಾಗೂ ಸ್ವಸ್ತಿಕ್ ಕನ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

Suddi Udaya

ಬಳಂಜ ಶಾಲಾ ಆಟದ ಮೈದಾನ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಧ್ಯಾನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಸಿದ್ಧಿಶ್ರೀ ಸಭಾಭವನಕ್ಕೆ ಸಹಾಯಧನ ಚೆಕ್ ಹಸ್ತಾಂತರ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya
error: Content is protected !!