July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಶ್ರೀರಾಮ ಅ.ಖಾ.ಹಿ.ಪ್ರಾ. ಶಾಲೆಗೆ ಬೆಂಗಳೂರು ಎಸ್ಕವ ಪ್ರೈ.ಲಿ ವತಿಯಿಂದ ಸಿಸಿ ಕ್ಯಾಮರಾ ಹಾಗೂ ಜನರೇಟರ್ ಕೊಡುಗೆ

ಸುಲ್ಕೇರಿ ಶ್ರೀರಾಮ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.30 ರಂದು ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇವರು ಶಾಲೆಗೆ ಕೊಡುಗೆಯಾಗಿ ನೀಡಿದ ರೂ. 1 ಲಕ್ಷ 69 ಸಾವಿರ ಮೌಲ್ಯದ ಸಿಸಿ ಕ್ಯಾಮರಾ ಹಾಗೂ ರೂ. 3 ಲಕ್ಷ 58 ಸಾವಿರ ಮೌಲ್ಯದ ಜನರೇಟರ್ ಇದರ ಉದ್ಘಾಟನಾ ಕಾರ್ಯಕ್ರಮವು ಜರಗಿತು.

ಕಾರ್ಯಕ್ರಮದಲ್ಲಿ ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಎ.ಜಿ.ಎಮ್ ಕಾರ್ಪೋರೇಟ್ ಎಚ್ ಆರ್ ರಾಜೇಶ್, ಸೀನಿಯರ್ ಮ್ಯಾನೇಜರ್ ರಾಘವೇಂದ್ರ ಕೆ , ಕಂಪನಿ ಕಾರ್ಯದರ್ಶಿ ಮಹೇಶ್ ಕುಮಾರ್, ಸೀನಿಯರ್ ಇಂಜಿನಿಯರ್ ಜೀವನ್ ಶೆಟ್ಟಿ, ಪ್ರೊಡಕ್ಷನ್ ಅಪರೇಟರ್ ಶರತ್ ಹೆಗ್ಡೆ ಸಾವ್ಯ, ಶಾಲಾ ಆಡಳಿತ ಮಂಡಳಿ, ಗೌರವಾಧ್ಯಕ್ಷ ಗಣೇಶ್ ಹೆಗ್ಡೆ, ಅಧ್ಯಕ್ಷ ರಾಜು ಪೂಜಾರಿ, ಸಾಮಾಜಿಕ ಕಾರ್ಯಕರ್ತ ವಿನಿತ್ ಸಾವ್ಯ, ಅಂಡಿಂಜೆ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಹೆಗ್ಡೆ ಉಪಸ್ಥಿತರಿದ್ದರು.

ಎಸ್ಕವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಇದರ ಅಧಿಕಾರಿ ವರ್ಗದವರನ್ನು ಶಾಲಾ ಆಡಳಿತ ಮಂಡಳಿ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯು ಜತೆ ಕಾರ್ಯದರ್ಶಿ ನಾರಾಯಣ ಪೂಜಾರಿ, ಕೋಶಾಧಿಕಾರಿ ಶಶಿಧರ ಶೆಟ್ಟಿ, ಸದಸ್ಯ ರಾದ ಎಚ್ ಎಲ್ ರಾವ್, ರಾಜೇಶ್ ಶೆಟ್ಟಿ, ದಯಾಕರ ರೈ, ಎಂ ಎಸ್.ಸಿ ಸುಲ್ಕೇರಿಯ ಅಧ್ಯಕ್ಷ ಸುನೀಲ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಒಟ್ಲ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚಿತ್ತರಂಜನ್ ಕಂಕನಾಡಿ ದಂಪತಿಗಳಿಂದ ಸಂಕ್ರಮಣ ಪೂಜೆ

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya

ಬೆಳ್ತಂಗಡಿ: ಮುಗುಳಿ ವಸತಿ ನಿಲಯದ ಬಳಿ ಅಡಿಕೆ ತೋಟದಲ್ಲಿ ಚಿರತೆ ಪತ್ತೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

Suddi Udaya

ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಪರೀಕ್ಷೆ: ಉಜಿರೆಯ ಗಾಂಧಿನಗರದ ವಿದ್ಯಾರ್ಥಿನಿಯ ಸಾಧನೆ

Suddi Udaya

ಬೆಳ್ತಂಗಡಿಯಲ್ಲಿ ಪೇಪರ್ ಲೇಸ್ ರಿಜಿಸ್ಟ್ರೇಷನ್ ತರಬೇತಿ

Suddi Udaya
error: Content is protected !!