ಉಜಿರೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿಯವರು ಉಜಿರೆ ಪ್ರೇರಣಾ ಸಂಜೀವಿನಿ ಒಕ್ಕೂಟದ ಆದಿಪರಾಶಕ್ತಿ ಮಹಿಳಾ ಸಂಜೀವಿನಿ ಒಕ್ಕೂಟ ನಡೆಸುತ್ತಿರುವ ಅಕ್ಕ ಕೆಫೆಗೆ ಭೇಟಿ ನೀಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ನ ಯೋಜನಾ ವ್ಯವಸ್ಥಾಪಕರಾದ ಹರಿಪ್ರಸಾದ್ ಮತ್ತು ಶಕುಂತಲಾ, ತಾಲೂಕು ಯೋಜನಾ ವ್ಯವಸ್ಥಾಪಕಿ ಪ್ರತಿಮಾ ಮತ್ತು ಸಂಯೋಜಕ ಜಯಾನಂದ, ಪ್ರೇರಣಾ ಒಕ್ಕೂಟದ ಅಧ್ಯಕ್ಷೆ ವಿನುತ ರಜತ್ ಗೌಡ ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಅಕ್ಕ ಕೆಫೆ ಮಾಲಕಿ ಶೀಲಾವತಿ ಸ್ವಾಗತಿಸಿದರು.













