ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿಮೂರ್ತಿಯ ಪ್ರತಿಷ್ಠಾಪಕರು ಹಾಗೂ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಪ್ರತಿಷ್ಠಾ ಮಹೋತ್ಸವದ ನಲ್ವತ್ತನಾಲ್ಕನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.2ರಂದು ತೋರಣಮುಹೂರ್ತ, ವಿಮಾನಶುದ್ಧಿ, ಷೋಡಶ ಕಲಶಾಭಿಷೇಕ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.

ಅಪರಾಹ್ನ ನಾಂದಿಮಂಗಲ ಕಾರ್ಯಕ್ರಮ ನಡೆಯಿತು. ಪೂಜ್ಯ 105 ಕ್ಷುಲ್ಲಕ ನಿರ್ವಾಣಸಾಗರ ಮಹಾರಾಜರು ಉಪಸ್ಥಿತರಿದ್ದರು. ಹೇಮಾವತಿ ವೀ. ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು.













