May 7, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಬ್ರಹ್ಮಕಲಶೋತ್ಸವ ಬೆಂಗಳೂರು ಸಮಿತಿ ಸಭೆ

ಬೆಳ್ತಂಗಡಿ: ಮಾ.3ರಿಂದ 11ರ ತನಕ ಜರಗಲಿರುವ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬೆಂಗಳೂರು ಸಮಿತಿಯ ಸಭೆ ಫೆ.1 ರಂದು ಬಸವನಗುಡಿಯ ಎಸ್ ಡಿಎಂ ಕಲಾ ಕಲ್ಯಾಣ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಸುರೇಂದ್ರ ಕುಮಾರ್ ಮಾತನಾಡಿ ಉಜಿರೆ ಮತ್ತು ಧರ್ಮಸ್ಥಳಕ್ಕೆ ದೈವ- ದೇವರ ಸಹಿತ ಹೆಚ್ಚಿನ ಸಂಬಂಧವಿದ್ದು ಸದಾ ಪರಸ್ಪರ ಸಹಕಾರ ನೀಡುವುದು ಸಂಪ್ರದಾಯವೂ ಆಗಿದೆ. ಬೆಂಗಳೂರಿನ ಸಮಿತಿಯಿಂದಲೂ ಬ್ರಹ್ಮಕಲಶೋತ್ಸವ ಸಂದರ್ಭ ಹೆಚ್ಚಿನ ಸಹಕಾರದ ಅಗತ್ಯವಿದೆ. ಬೆಂಗಳೂರಿನಲ್ಲಿರುವ ನಮ್ಮ ತಾಲೂಕಿನ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಸೇವೆ ಮಾಡಲು ಇದೊಂದು ಅಪೂರ್ವ ಅವಕಾಶವಾಗಿದೆ ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮದ ರೂಪು ರೇಷೆಗಳನ್ನು ಪ್ರಸ್ತುತಪಡಿಸಿ ಸಹಕಾರವನ್ನು ಕೋರಿದರು.
ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್, ವಿಜಯ ಗೋಪುರ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ, ಬೆಂಗಳೂರು ಸಮಿತಿ ಸಂಚಾಲಕ ಮಂಜುನಾಥ ಕನ್ಯಾಡಿ, ಉದ್ಯಮಿ ತ್ರಿವಿಕ್ರಮ ಸಫಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬಳಂಜ, ಸಂಚಾಲಕ ಮೋಹನ್ ಶೆಟ್ಟಿಗಾರ್,ಅಜಯ್ ಶೆಟ್ಟಿ, ಪ್ರಶಾಂತ ಜೈನ್, ಚೇತನ್ ಸಾಲಿಯಾನ್, ರಾಮಣ್ಣ ಗೌಡ, ವಿಶ್ವನಾಥ ರಸರಾಗ, ಶರತ್ ಕುಮಾರ್ ಮಂಚಿಬೆಟ್ಟು,ಪ್ರಕಾಶ್ ಕುದ್ದಣ್ಣಾಯ, ಶಿವಪ್ರಸಾದ ಸುರ್ಯ, ಕಚೇರಿ ಪ್ರಬಂಧಕ ರಾಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಸಂಧ್ಯಾ ಶ್ಯಾಮ್ ಆಚಾರ್ಯ ಸ್ವಾಗತಿಸಿದರು. ವೆಂಕಟರಮಣ ರಾವ್ ವಂದಿಸಿದರು. ರೂಪಲತಾ ಧರ್ಮಸ್ಥಳ ಹಾಗೂ ಸ್ವಸ್ತಿಕ್ ಕನ್ಯಾಡಿ ಕಾರ್ಯಕ್ರಮ ನಿರೂಪಿಸಿದರು.

Related posts

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!