ಬೆಳ್ತಂಗಡಿ: ಮಾ.3ರಿಂದ 11ರ ತನಕ ಜರಗಲಿರುವ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬೆಂಗಳೂರು ಸಮಿತಿಯ ಸಭೆ ಫೆ.1 ರಂದು ಬಸವನಗುಡಿಯ ಎಸ್ ಡಿಎಂ ಕಲಾ ಕಲ್ಯಾಣ ಮಂಟಪದಲ್ಲಿ ಜರಗಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಧರ್ಮಸ್ಥಳದ ಸುರೇಂದ್ರ ಕುಮಾರ್ ಮಾತನಾಡಿ ಉಜಿರೆ ಮತ್ತು ಧರ್ಮಸ್ಥಳಕ್ಕೆ ದೈವ- ದೇವರ ಸಹಿತ ಹೆಚ್ಚಿನ ಸಂಬಂಧವಿದ್ದು ಸದಾ ಪರಸ್ಪರ ಸಹಕಾರ ನೀಡುವುದು ಸಂಪ್ರದಾಯವೂ ಆಗಿದೆ. ಬೆಂಗಳೂರಿನ ಸಮಿತಿಯಿಂದಲೂ ಬ್ರಹ್ಮಕಲಶೋತ್ಸವ ಸಂದರ್ಭ ಹೆಚ್ಚಿನ ಸಹಕಾರದ ಅಗತ್ಯವಿದೆ. ಬೆಂಗಳೂರಿನಲ್ಲಿರುವ ನಮ್ಮ ತಾಲೂಕಿನ ಮಂದಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ದೇವರ ಸೇವೆ ಮಾಡಲು ಇದೊಂದು ಅಪೂರ್ವ ಅವಕಾಶವಾಗಿದೆ ಎಂದರು.

ಪ್ರಾಸ್ತವಿಕವಾಗಿ ಮಾತನಾಡಿದ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಕಾರ್ಯಕ್ರಮದ ರೂಪು ರೇಷೆಗಳನ್ನು ಪ್ರಸ್ತುತಪಡಿಸಿ ಸಹಕಾರವನ್ನು ಕೋರಿದರು.
ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್, ವಿಜಯ ಗೋಪುರ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ, ಬೆಂಗಳೂರು ಸಮಿತಿ ಸಂಚಾಲಕ ಮಂಜುನಾಥ ಕನ್ಯಾಡಿ, ಉದ್ಯಮಿ ತ್ರಿವಿಕ್ರಮ ಸಫಲ್ಯ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಭರತ್ ಕುಮಾರ್, ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬಳಂಜ, ಸಂಚಾಲಕ ಮೋಹನ್ ಶೆಟ್ಟಿಗಾರ್,ಅಜಯ್ ಶೆಟ್ಟಿ, ಪ್ರಶಾಂತ ಜೈನ್, ಚೇತನ್ ಸಾಲಿಯಾನ್, ರಾಮಣ್ಣ ಗೌಡ, ವಿಶ್ವನಾಥ ರಸರಾಗ, ಶರತ್ ಕುಮಾರ್ ಮಂಚಿಬೆಟ್ಟು,ಪ್ರಕಾಶ್ ಕುದ್ದಣ್ಣಾಯ, ಶಿವಪ್ರಸಾದ ಸುರ್ಯ, ಕಚೇರಿ ಪ್ರಬಂಧಕ ರಾಜ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಸಂಧ್ಯಾ ಶ್ಯಾಮ್ ಆಚಾರ್ಯ ಸ್ವಾಗತಿಸಿದರು. ವೆಂಕಟರಮಣ ರಾವ್ ವಂದಿಸಿದರು. ರೂಪಲತಾ ಧರ್ಮಸ್ಥಳ ಹಾಗೂ ಸ್ವಸ್ತಿಕ್ ಕನ್ಯಾಡಿ ಕಾರ್ಯಕ್ರಮ ನಿರೂಪಿಸಿದರು.













