September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ನಡ- ಕನ್ಯಾಡಿ ಗ್ರಾಮಗಳಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

ನಡ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ ಬಗ್ಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಡ-ಕನ್ಯಾಡಿ ಭಕ್ತಾಭಿಮಾನಿಗಳ ಸಮಾಲೋಚನಾ ಸಭೆಯು ಫೆ.01ರಂದು ಶ್ರೀ ಗುರುನಾರಾಯಣ ಸೇವಾ ಸಂಘ ನಡ ಇಲ್ಲಿ ನಡೆಯಿತು. ಸಂಘದ ಅಧ್ಯಕ್ಷ ದಿವಾಕರ್ ಸಾಲಿಯನ್ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಆಡಳಿತ ಸಮಿತಿಯ ಸದಸ್ಯರೂ, ಬೆಳ್ತಂಗಡಿ ತಾಲೂಕಿನ ಜಾತ್ರೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಶ್ರೀ ನಿತ್ಯಾನಂದ ನಾವರ ರವರು ಪ್ರಾಸ್ತಾವಿಕವಾಗಿ ಮಾತನಾಡಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಹಾಗೂ ಕ್ಷೇತ್ರದಲ್ಲಿ ಆಗಲಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ವಿವರಿಸಿ ತಾಲೂಕಿನ ಭಕ್ತಾಭಿಮಾನಿಗಳನ್ನು ಶ್ರೀ ಕ್ಷೇತ್ರಕ್ಕೆ ಆಹ್ವಾನಿಸಿದರು.

ವೇದಿಕೆಯಲ್ಲಿ ಗುರುನಾರಾಯಣ ಸೇವಾ ಸಂಘ ನಡ -ಕನ್ಯಾಡಿ ಇದರ ಉಪಾಧ್ಯಕ್ಷೆ ವಸಂತಿ ವಸಂತ ಪೂಜಾರಿ, ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಜಗದೀಶ್ ನಡ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷರಾದ ಚಿತ್ರಾವತಿ ಭಂಡಾರಿ ಕೋಡಿ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಗ್ರಾಮ ಸಮಿತಿ ಅಧ್ಯಕ್ಷ ರಮೇಶ್ ಕೋಟ್ಯಾನ್ ಕುತ್ರೋಟ್ಟು ಹಾಗೂ ಕಾರ್ಯದರ್ಶಿಯಾದ ಜಯಾನಂದ ಕೂಡೇಲು, ಉಪಸ್ಥಿತರಿದ್ದರು. ಸಮಾರಂಭದಲ್ಲಿ ಉಮೇಶ್ ಪೂಜಾರಿ ಹೊಕ್ಕಿಲ, ಕೃಷ್ಣಪ್ಪ ಪೂಜಾರಿ, ಕಮಲ, ಧನುಷ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಶ್ರೀ ಗುರು ನಾರಾಯಣ ಸೇವಾ ಸಂಘ ನಡ-ಕನ್ಯಾಡಿ ಇದರ ಪ್ರಧಾನ ಕಾರ್ಯದರ್ಶಿಯಾದ ಮೀನಾಕ್ಷಿ ಕೆ ಭಂಡಾರಿ ಕೋಡಿಯವರು ಕಾರ್ಯಕ್ರಮವನ್ನು ಸಂಯೋಜಿಸಿ ಕಾರ್ಯಕ್ರಮ ನಿರೂಪಿಸಿದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya

ಧರ್ಮಸ್ಥಳ – ಮಂಗಳೂರು ತುಳುನಾಡು ಸಾರಿಗೆ ಬಸ್

Suddi Udaya

ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ: ಡಾ.ವೀರೇಂದ್ರ ಹೆಗ್ಗಡೆಯವರಿಗೆ ಹೋರಾಟ ಸಮಿತಿಯಿಂದ ಮನವಿ

Suddi Udaya

ಮಡಂತ್ಯಾರು ಕೃತಿ ಪೂಜಾರಿಗೆ ರಾಜ್ಯ ಮಟ್ಟದ “ಗಾನ ಸಿರಿ” ಪ್ರಶಸ್ತಿ

Suddi Udaya

ತುಲು ಕಥೆ ಬರಹಗಾರರಿಗೆ ಸುವರ್ಣ ವೇದಿಕೆ; “ಕುದ್ಕ ಬಚ್ಚಿರೆ” ತುಲು ಸಣ್ಣ ಕಥಾ ಸ್ಪರ್ಧೆ: 10 ವಿಜೇತರಿಗೆ ನಗದು ಬಹುಮಾನ

Suddi Udaya
error: Content is protected !!