July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ. 1ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಜ.31ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ , ಮಹಾಪೂಜೆ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ರಂಗಪೂಜೆ ನಡೆಯಿತು.


ಫೆ.1 ರಂದು ಬೆಳಿಗ್ಗೆ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ, ಮಹಾಪೂಜೆ
ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ , , ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ ಮಂತ್ರಾಕ್ಷತೆ ನಡೆಯಿತು. ಸಾಯಂಕಾಲ ಊರವರಿಂದ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದುರ್ಗಾ ಫ್ರೆಂಡ್ಸ್ ಬೂಡುಮುಗೇರು ಇವರ ಪ್ರಾಯೋಜಕತ್ವದಲ್ಲಿ ಪೆರ್ಮೆದ ಕಲಾವಿದೆರ್ ಚೇಳ್ಳಾರು ಇವರು ಅಭಿನಯಿಸುವ “ಎನ್ನಿಲೆಕ ಇಜ್ಜೆರ್” ತುಳು ಹಾಸ್ಯಮಯ ನಾಟಕ ಜರುಗಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ರಾಜಗೋಪಾಲ ಯಂ. ಪಿ., ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಕೆ. ಉಡ್ಯೇರೆ, ಉಪಾಧ್ಯಕ್ಷ ಪದ್ಮಯ್ಯ ಗೌಡ ಉಡ್ಯೇರೆ, ಕಾರ್ಯದರ್ಶಿ ಟಿ. ರವಿಚಂದ್ರ ರಾವ್ ಅಂಗಡಿತೋಟ, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ ಅರಸಿನಮಕ್ಕಿ, ಅರ್ಚಕರಾದ ರಾಮಕೃಷ್ಣ ರಾವ್, ಅರವಿಂದ ಭಿಡೆ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಪುತ್ತಿಲ : ಕಲ್ಲಾಜೆ ಎಂಬಲ್ಲಿ ಕುಸಿಯುವ ಭೀತಿಯಲ್ಲಿರುವ ಸೇತುವೆ: ದುರಸ್ತಿಗೆ ಆಗ್ರಹ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಗೆ ಪುನಶ್ಚೇತನ ಕಾರ್ಯಾಗಾರ

Suddi Udaya

ರಾಜ್ಯದ ಟಾಪ್ 10 ರ‍್ಯಾಂಕ್‌ಗಳಲ್ಲಿ ಆಳ್ವಾಸ್‌ನ 45 ವಿದ್ಯಾರ್ಥಿಗಳು

Suddi Udaya
error: Content is protected !!