30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

ಬೆಳ್ತಂಗಡಿ: ಯುವಕರಿಗೆ ಉದ್ಯೋಗ, ಕೃಷಿಕರಿಗೆ ಅನುಕೂಲ, ಗ್ರಾಮೀಣ ಪ್ರದೇಶಕ್ಕೆ ಸೌಲಭ್ಯ ನೀಡುವ ರೀತಿ ಬಜೆಟ್ ಇರಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯಾರೂ ಊಹಿಸದ ರೀತಿಯಲ್ಲಿ ಕಳಪೆ ಮಟ್ಟದಲ್ಲಿ ಬಜೆಟ್ ಮಂಡಿಸಲಾಗಿದೆ.

ಕೇಂದ್ರದ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ದಕ್ಷಿಣ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಮುಖ್ಯವಾಗಿ ಕೃಷಿಗೆ ಕಳೆದ ಬಾರಿಗಿಂತಲೂ ಕಡಿಮೆ ಬಜೆಟ್ ನಿಗದಿ‌ಮಾಡಿ ಅನ್ಯಾಯ ಮಾಡಿದೆ. ಯೂರಿಯಾ ಸಬ್ಸಿಡಿ ಕಡಿತ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಕಳೆದ ಬಾರಿ 1.70 ಲಕ್ಷಕೋಟಿ ರೂ. ಕೃಷಿಗೆ ನೀಡಲಾಗಿತ್ತು, ಈ ಬಾರಿ 1.62 ಲಕ್ಷ ಕೋಟಿ ರೂ. ನಿಗದಿ ಮಾಡಿದೆ. ಹೀಗಾದಲ್ಲಿ ಕೃಷಿಕರು ಬದುಕುವುದು ಹೇಗೆ‌. ಶ್ರೀಮಂತ ವರ್ಗದ ಓಲೈಕೆ ಮಾಡುವ ಭರದಲ್ಲಿ ದುಡಿಯುವ ವರ್ಗವನ್ನು ನಿರ್ಲಕ್ಷಿಸಲಾಗಿದೆ. ಇದೀಗ ಹವಾಮಾನ ‌ವಿಪರೀತ ಬದಲಾಗುತ್ತಿದ್ದು, ಕೃಷಿಕರು ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ, ಇಂತಹ ಸಂದರ್ಭದಲ್ಲೂ ಬೆಳೆ ವಿಮೆಯನ್ನು ಹೆಚ್ಚು ಮಾಡಿಲ್ಲ.

ಇನ್ನು ಪರಿಶಿಷ್ಟ ಜಾತಿ, ಪಂಗಡಗಳು ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಯಾವುದೇ ಆದ್ಯತೆ ನೀಡಿಲ್ಲ. ಇವುಗಳಲ್ಲಿ ತಾರತಮ್ಯ ನೀತಿ ಹಾಗೂ ಈ ವರ್ಗವನ್ನು ನಿರ್ಲಕ್ಷ್ಯ ಧೋರಣೆಯನ್ನು ಕೇಂದ್ರ ಅನುಸರಿಸಿದೆ. ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರಕಾರಕ್ಕೆ ನೀಡಬೇಕಾಗಿದ್ದ ತೆರಿಗೆ ಪಾಲಿನ ಹಣವನ್ನು ಸರಿಯಾಗಿ ನೀಡಿಲ್ಲ. ಕೇಂದ್ರ ಸರಕಾರಕ್ಕೆ ಬೇಕಾದ ದೊಡ್ಡ ಉದ್ಯಮಿಗಳಿಗೆ ಮತ್ತು ತೆರಿಗೆ ಕಳ್ಳರಿಗೆ ಹೆಚ್ಚಿನ ರಿಯಾಯಿತಿ ಮತ್ತು ಸೌಲಭ್ಯ ಕಲ್ಪಿಸಿದೆ. ಈ ಬಾರಿಯ ಬಜೆಟ್ ಸಾಮಾನ್ಯ ಜನರ ಜೀವನದಲ್ಲಿ ತಲ್ಲಣ ಸೃಷ್ಟಿಸಿದೆ.

Related posts

ಬಜಿರೆ: ಹೊಸಪಟ್ಣ ನಿವಾಸಿ ಸಂಜೀವ ಹೆಗ್ಡೆ ನಿಧನ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya

ತೆಕ್ಕಾರು ಗ್ರಾ.ಪಂನಲ್ಲಿ ವಿಶೇಷ ಗ್ರಾಮ ಸಭೆ

Suddi Udaya
error: Content is protected !!