25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ ಸೇವೆ, ಹಸಿರುವಾಣಿ ಸಮರ್ಪಣೆ , ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ ‘ ನಡೆಯಿತು. ಸಂಜೆ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರ ಪಾಣಿ ರಾಧಾಕೃಷ್ಣ ಯಡಪಡಿತ್ತಾಯ , ಗೌರವ ಸಲಹೆಗಾರ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್ ಹಾರ, ಸದಸ್ಯರಾದ ಶಶಿ ಪುತ್ಯೆಮಜಲು, ಸುರೇಶ ಪಡಿಪಂಡ, ಜಯರಾಮ ನ್ಯೂ ಆರಿಗ, ಜಯಾನಂದ ಬಂಟ್ರಿಯಾಲ್, ದಾಮೋದರ ನ್ಯೂ ಆರಿಗ, ಜಯಂತಿ ಹಾರ, ಕುಸುಮ ಪೊಯ್ಯೊಳೆ, ಗಣೇಶ ಹಾರ, ಮೋನಪ್ಪ ಗೌಡ ಕೆಂಪಮುದೇಲು, ನಾಗೇಶ್ ಹಾರ, ದಾಮೋದರ ಮಡ್ಯಲಗುಂಡಿ, ಗಣೇಶ್ ಕಲಾಯಿ, ಮುತ್ತಪ್ಪ ಡೆಂಜ, ವಾಸುದೇವ ಮಂಡೆಕರ, ಬಾಬು ಪುತ್ಯೆಮಜಲು, ಶೇಖರ ಪೂಜಾರಿ, ಗೌರವ್ ಹೊಸಮಜಲು,
ದೈವದ ಪರಿಚಾರಕರಾದ ನೇಮಣ್ಣ ಗೌಡ, ದಾಮೋದರ ಪೂಜಾರಿ, ಹೊನ್ನಪ್ಪ ಗೌಡ , ಸುಂದರ ಗೌಡ , ಶೀನಪ್ಪ ಗೌಡ, ಆನಂದ ಗೌಡ , ವೆಂಕಟರಮಣ, ಮಾಯಿಲ ವಿಭಾಗದವರು, ಗುರುವ, ಹಾರ, ಮುಂಡ, ಪೊಯ್ಯೊಳೆ ಊರಿನ ಹತ್ತು ಸಮಸ್ತರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

2024-25 ನೇ ಸಾಲಿನ ಬೆಳೆ ವಿಮೆಯನ್ನು ಕೃಷಿಕರಿಗೆ ನೀಡುವಂತೆ ಆಗ್ರಹಿಸಿ ಕೊಕ್ಕಡ ಕೃಷಿಕರಿಂದ ಬೆಂಗಳೂರು ಟಾಟಾ ಎಐಜಿ ಜನರಲ್ ವಿಮಾ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!