22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖ್ಯಾತ ಹೃದ್ರೋಗ ತಜ್ಞ ಡಾ. ರಾಮಯ್ಯ ಗೌಡ ದಂಪತಿ ಉಜಿರೆಯ ಎಸ್‌ಡಿಎಂ ಆಸ್ಪತ್ರೆಗೆ ಭೇಟಿ

ಉಜಿರೆ: ಅಮೆರಿಕದಲ್ಲಿ ಖ್ಯಾತ ಹೃದಯ ಹಾಗೂ ಥೊರಾಸಿಕ್ ( Thorasic ) ಶಸ್ತ್ರಚಿಕಿತ್ಸಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಯು. ರಾಮಯ್ಯ ಗೌಡ ಹಾಗೂ ಅವರ ಪತ್ನಿ, ನರ್ಸಿಂಗ್ ಕಾಲೇಜಿನ ಪ್ರಾಧ್ಯಾಪಕಿ ಕೊನ್ನಿ ಗೌಡ ( Connie Gowda ) ಅವರು ಇತ್ತೀಚೆಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಗೆ ಭೇಟಿ ನೀಡಿದರು.

1939ರಲ್ಲಿ ಜನಿಸಿದ ಡಾ. ರಾಮಯ್ಯ ಗೌಡ ಅವರು ಬೆಳ್ತಂಗಡಿಯ ವಳಂಬ್ರ ಕುಟುಂಬಕ್ಕೆ ಸೇರಿದವರು. ಕಡಿರುದ್ಯಾವರ ಸರ್ಕಾರಿ ಶಾಲೆ ಹಾಗೂ ಉಜಿರೆಯ ಎಸ್‌ಡಿಎಂ ಹೈಸ್ಕೂಲ್‌ನಲ್ಲಿ ವಿದ್ಯಾಭ್ಯಾಸ ಮಾಡಿ, ಮಂಗಳೂರಿನ ಸೆಂಟ್ ಅಲೋಶಿಯಸ್ ಕಾಲೇಜಿನಲ್ಲಿ ಪಿಯುಸಿ ಮತ್ತು ಮೈಸೂರಿನಲ್ಲಿ ಎಂ.ಬಿ.ಬಿ.ಎಸ್ ಪದವಿ ಪಡೆದಿದ್ದಾರೆ. 1965ರಲ್ಲಿ ಉನ್ನತ ಶಿಕ್ಷಣಕ್ಕಾಗಿ ಅಮೆರಿಕಕ್ಕೆ ತೆರಳಿ ಹೃದಯ ಮತ್ತು ಥೊರಾಸಿಕ್ ( Thorasic )ಶಸ್ತ್ರಚಿಕಿತ್ಸೆಯಲ್ಲಿ ಪರಿಣತಿ ಪಡೆದು ನ್ಯೂಯಾರ್ಕ್ ಹಾಗೂ ಗ್ರಾಹಂ ಮೆಡಿಕಲ್ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

ನಿವೃತ್ತಿಯ ನಂತರವೂ ಯಾವುದೇ ಸಂಬಳವಿಲ್ಲದೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಸ್ವದೇಶಕ್ಕೆ ಆಗಮಿಸಿದ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಬೆಂಬಲ ಹಾಗೂ ಮಾರ್ಗದರ್ಶನ ನೀಡುತ್ತಿರುವುದು ವಿಶೇಷ. ಎಸ್‌ಡಿಎಂ ಆಸ್ಪತ್ರೆ ಆಡಳಿತ ಮಂಡಳಿ ಮುಖ್ಯಸ್ಥರಾದ ಎಂ ಜನಾರ್ದನ್, ವೈದ್ಯರು ಹಾಗೂ ಸಿಬ್ಬಂದಿ ಡಾ. ರಾಮಯ್ಯ ಗೌಡ ಕುಟುಂಬವನ್ನ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಿದರು.

Related posts

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ

Suddi Udaya

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya
error: Content is protected !!