September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ವಿಧಾನಸಭೆಯಲ್ಲಿ ಪ್ರತಿಧ್ವನಿ; ತ್ವರಿತ ತನಿಖೆಗೆ ಶಾಸಕ ಹರೀಶ್ ಪೂಂಜ ಆಗ್ರಹ

ಬೆಳ್ತಂಗಡಿ: ಗೇರುಕಟ್ಟೆ ಸಮೀಪದ ಸಂಬೋಳ್ಯದ ಬಾಲಕ ಸುಮಂತ್ (15ವ) ನಿಗೂಢ ರೀತಿಯಲ್ಲಿ ಮೃತಪಟ್ಟಿರುವುದು ಗಂಭೀರ ವಿಚಾರವಾಗಿದ್ದು, ಪೊಲೀಸ್ ಇಲಾಖೆ ಪ್ರಕರಣವನ್ನು ಲಘುವಾಗಿ ಪರಿಗಣಿಸಿಲ್ಲ. ಈಗಾಗಲೇ 4 ವಿಶೇಷ ತಂಡಗಳ ಮೂಲಕ ತನಿಖೆ ನಡೆಯುತ್ತಿದೆ. ಪ್ರಕರಣವನ್ನು ಶೀಘ್ರ ಭೇದಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.

ವಿಧಾನಸಭೆ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಧನುಪೂಜೆಗೆಂದು ತೆರಳಿದ್ದ ಬಾಲಕ ಮನೆ ಸಮೀಪದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ತನಿಖೆಯ ಪ್ರಗತಿ ಕುರಿತು ತಿಳಿಸುವ ಜತೆಗೆ ಸತ್ಯಾಸತ್ಯತೆ ಪತ್ತೆ ಮಾಡಬೇಕು. ಆತ ಯುವ ವಿಜ್ಞಾನಿಯಾಗಿ ಹೆಸರು ಮಾಡಿದ್ದು, ಅಹಮದಾಬಾದ್‌ನಲ್ಲಿ ನಡೆಯ ಬೇಕಿದ್ದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೂ ಆಯ್ಕೆಯಾಗಿದ್ದ. ಜಿಲ್ಲೆಯ ಜನತೆ ಪ್ರಕರಣದ ಕುರಿತು ಆತಂಕ ವ್ಯಕ್ತಪಡಿಸಿದ್ದು ಪ್ರಕರಣವನ್ನು ಭೇದಿಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಶಾಸಕರು ಗೃಹ ಇಲಾಖೆಯನ್ನು ಒತ್ತಾಯಿಸಿದ್ದಾರೆ.

ಮೃತ ಬಾಲಕನ ತಲೆಯಲ್ಲಿ ಗಾಯ ಕಂಡು ಬಂದಿರುವುದರಿಂದ ಬಿಎನ್‌ಎಸ್ ಎಸ್ 103 (1) ನಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಯಾಗಿದ್ದರೆ ಆರೋಪಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಶಾಸಕರನ್ನೂ ವಿಶ್ವಾಸಕ್ಕೆ ಪಡೆದು ಪ್ರಕರಣವನ್ನು ಭೇದಿಸಲು ಇಲಾಖೆಗೆ ಸೂಚನೆ ನೀಡುವುದಾಗಿ ಗೃಹ ಸಚಿವರು ತಿಳಿಸಿದ್ದಾರೆ.

Related posts

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya
error: Content is protected !!