23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ: 130 ಕೋಟಿ ವ್ಯವಹಾರ- ರೂ.17.92 ಲಕ್ಷ ಲಾಭ -ಶೇ 14 ಡಿವಿಡೆಂಟ್

Suddi Udaya

ನಾವರ: ಮನೆಯೊಳಗೆ ಅವಿತುಕೊಂಡಿದ್ದ ಕಾಳಿಂಗ ಸರ್ಪ, ಭಯಭೀತರಾದ ಕುಟುಂಬ: ಸ್ನೇಕ್ ಅಶೋಕ್ ಲಾಯಿಲರವರಿಂದ ಯಶಸ್ವಿ ಕಾರ್ಯಾಚರಣೆ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ: ವಂಚನೆ ಪ್ರಕರಣದಲ್ಲಿ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!