ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ ಫೆ.2ರಂದು ಜರಗಿತು.

ಬೆಳ್ತಂಗಡಿ ತಾಲೂಕು ಕಾನೂನು ನೆರವು ಸಮಿತಿ ಮತ್ತು ಉಜಿರೆ ಬೆಳಾಲು ‘ಶೌರ್ಯ’ ವಿಪತ್ತು ನಿರ್ವಹಣೆ ಘಟಕದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ. ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಸಂಚಾರ ಪೊಲೀಸ್ ಸಿಬ್ಬಂದಿ ಅಭಿಜಿತ್, ಬೆಳ್ತಂಗಡಿ ಶೌರ್ಯ ವಿಪತ್ತು ನಿರ್ವಹಣೆ ಘಟಕದ ಮಾಸ್ಟರ್ ಅವಿನಾಶ್ ಭಿಡೆ ಉಪಸ್ಥಿತರಿದ್ದರು.

ಊರಿನ ಆಟೊ ಚಾಲಕರು ಮತ್ತು ವಾಹನ ಮಾಲಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಸ್ವಾಗತಿಸಿದರು. ಶೌರ್ಯ ತುರ್ತು ಸ್ಪಂದನಾ ಘಟಕದ ಸಂಯೋಜಕ ಸುಲೈಮಾನ್ ಭೀಮಂಡೆ ಕಾರ್ಯಕ್ರಮ ನಿರ್ವಹಿಸಿದರು.

Related posts

ನೆರಿಯದಲ್ಲಿ ಚಿರತೆ ಪತ್ತೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!