July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ ಪರಿಸರದಲ್ಲಿ ಚಿರತೆ ದಾಳಿಗೆ ನಾಯಿ ಬಲಿಯಾಗಿದೆ. ಆ ಪ್ರದೇಶದ ಜನರು ನಾಯಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ಚಿರತೆಯನ್ನು ಕಂಡು ಭಯಭೀತರಾಗಿದ್ದಾರೆ. ಮನೆಯ ಕಿಟಕಿಯಲ್ಲಿ ಚಿರತೆ ಓಡಾಟವನ್ನು ಗಮನಿಸಿದ ನಿವಾಸಿಗಳು ಮನೆಯ ಬಾಗಿಲನ್ನು ಮುಚ್ಚಿ ಆತಂಕದಿಂದ ಕುಳಿತುಕೊಂಡಿದ್ದಾರೆ.

ಇನ್ನೂ ಈ ರಸ್ತೆ ಮೂಲಕ ಶಾಲಾ ಮಕ್ಕಳು ಅನೇಕ ಮಂದಿ ಉದ್ಯೋಗಿಗಳು ಸಂಚಾರಿಸುವ ದಾರಿಯಾಗಿದ್ದು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಉದಯನಗರ ಬಳಿ ಕಾಣಿಸಿಕೊಂಡಿದ್ದ ಚಿರತೆ ಶೀಘ್ರವೇ ಬೆಳ್ತಂಗಡಿ ಪಟ್ಟಣ ತಲುಪುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

Related posts

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ ಕರ್ಬಾರಿ ರವರು ಭೇಟಿ ಗ್ರಾಮ ಪಂಚಾಯತ್ ಕಾರ್ಯ ವೈಖರಿಗೆ ಮೆಚ್ಚುಗೆ

Suddi Udaya

ಧರ್ಮಸ್ಥಳದಲ್ಲಿ 55ನೇ ವರ್ಷದ ಪುರಾಣ ಕಾವ್ಯ ವಾಚನ-ಪ್ರವಚನ ಉದ್ಘಾಟನೆ

Suddi Udaya

ಮಿತ್ತಬಾಗಿಲು ಸರಕಾರಿ ಪ್ರೌಢಶಾಲೆಗೆ ‘ಎ’ ಗ್ರೇಡ್ ನೊಂದಿಗೆ ಶೇ.100 ಫಲಿತಾಂಶ

Suddi Udaya

ಪದ್ಮುಂಜದಲ್ಲಿ ವಾಹನ ತಡೆದು ಹಲ್ಲೆ ಪ್ರಕರಣ-ಶರತ್ ಚೌಟನಿಗೆ ಜೈಲು ಶಿಕ್ಷೆ

Suddi Udaya
error: Content is protected !!