25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

ಬೆಳ್ತಂಗಡಿ : ಕಳೆದ ಕೆಲವು ದಿನಗಳಿಂದ ಬೆಳ್ತಂಗಡಿ ನಗರದಲ್ಲಿ ಚಿರತೆ ಓಡಾಟ ಮುಂದುವರಿದಿದ್ದು ಜನರಲ್ಲಿ ಆತಂಕ ಮತ್ತುಷ್ಟು ಹೆಚ್ಚಿದೆ. ಇಂದು ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಳ್ತಂಗಡಿ ಸುದೆಮುಗೇರು ವನ್ಯಜೀವಿ ಇಲಾಖೆ ಸಮೀಪ ಪರಿಸರದಲ್ಲಿ ಚಿರತೆ ದಾಳಿಗೆ ನಾಯಿ ಬಲಿಯಾಗಿದೆ. ಆ ಪ್ರದೇಶದ ಜನರು ನಾಯಿಯನ್ನು ಹೊತ್ತುಕೊಂಡು ಹೋಗುತ್ತಿದ್ದ ಚಿರತೆಯನ್ನು ಕಂಡು ಭಯಭೀತರಾಗಿದ್ದಾರೆ. ಮನೆಯ ಕಿಟಕಿಯಲ್ಲಿ ಚಿರತೆ ಓಡಾಟವನ್ನು ಗಮನಿಸಿದ ನಿವಾಸಿಗಳು ಮನೆಯ ಬಾಗಿಲನ್ನು ಮುಚ್ಚಿ ಆತಂಕದಿಂದ ಕುಳಿತುಕೊಂಡಿದ್ದಾರೆ.

ಇನ್ನೂ ಈ ರಸ್ತೆ ಮೂಲಕ ಶಾಲಾ ಮಕ್ಕಳು ಅನೇಕ ಮಂದಿ ಉದ್ಯೋಗಿಗಳು ಸಂಚಾರಿಸುವ ದಾರಿಯಾಗಿದ್ದು ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ನಿನ್ನೆ ಉದಯನಗರ ಬಳಿ ಕಾಣಿಸಿಕೊಂಡಿದ್ದ ಚಿರತೆ ಶೀಘ್ರವೇ ಬೆಳ್ತಂಗಡಿ ಪಟ್ಟಣ ತಲುಪುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಅಭಿಪ್ರಾಯಿಸಿದ್ದಾರೆ. ಅರಣ್ಯ ಇಲಾಖೆ ತಕ್ಷಣವೇ ಚಿರತೆ ಸೆರೆಗೆ ಬೋನ್ ಅಳವಡಿಸುವಂತೆ ಒತ್ತಾಯಿಸಿದ್ದಾರೆ.

Related posts

ಧರ್ಮಸ್ಥಳ: ಆಸರೆ ಆನಿಮಲ್ ಟ್ರಸ್ಟ್ ಗೆ ಮೊದಲ ಸೇವಾ ಯೋಜನೆ ಹಸ್ತಾಂತರ

Suddi Udaya

ಡಿ.17: ನಾರಾವಿ ಎನ್ ಎಸ್ ಎಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಅಝ್ಹಾ ಪ್ರಾರ್ಥನೆ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya
error: Content is protected !!