September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

ಮಡಂತ್ಯಾರು: ಇಲ್ಲಿಯ ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘಕ್ಕೆ ಅಡವಿಡಲು ನಕಲಿ ಚಿನ್ನದ ಸರಗಳನ್ನು ನೀಡಿದ ಬಗ್ಗೆ ಆರೋಪಿ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಅಬ್ದುಲ್ ನಝೀರ್ ಎಂದು ಹೆಸರಿಸಲಾಗಿದೆ.

ಈ ಬಗ್ಗೆ ಮಡಂತ್ಯಾರು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ಧ ಸಹಕಾರಿ ಸಂಘ (ನಿ) ಇದರ ವ್ಯವಸ್ಥಾಪಕಿ, ಬಂಟ್ವಾಳ ತಾಲೂಕು, ಸರಪಾಡಿ ಗ್ರಾಮದ ನಿವಾಸಿ ಅಶ್ವಿತಾ (34) ಅವರು ಪೊಲೀಸರಿಗೆ ದೂರು ನೀಡಿದ್ದು, ಫೆ.2 ರಂದು ಬೆಳಿಗ್ಗೆ 2 ಗ್ರಾಹಕರು ಬಂದು ಅದರಲ್ಲಿ ಆರೋಪಿ ಅಬ್ದುಲ್ ನಝೀರ್ ಎಂಬಾತನ ಹೆಸರಿನಲ್ಲಿ ಚಿನ್ನದ ಸರ ಅಡವಿಡಲು ಇರುವುದಾಗಿ ತಿಳಿಸಿದಂತೆ 3 ಚಿನ್ನದ ಸರಗಳನ್ನು ನೀಡಿದ್ದು, ಸದ್ರಿ ಚಿನ್ನವನ್ನು ಪರೀವೀಕ್ಷಕರಲ್ಲಿ ಪರಿಶೀಲನೆ ನಡೆಸಿದಾಗ, ಸದ್ರಿ ಮೂರು ಚಿನ್ನದ ಸರಗಳು ನಕಲಿ ಎಂದು ಸಾಬೀತಾಗಿರುತ್ತದೆ ಎಂದು ನೀಡಿರುವ ದೂರಿನಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಮಿತ್ತಬಾಗಿಲು ಗ್ರಾ.ಪಂ. ನ ವಿಶೇಷ ಗ್ರಾಮಸಭೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

`ಬೆಸ್ಟ್ ಎಂಎಲ್ಎ‌’ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಪುದುವೆಟ್ಟು ಬಿಜೆಪಿ ಶಕ್ತಿ ಕೇಂದ್ರದಿಂದ ಗೌರವಾರ್ಪಣೆ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ನಿಧಿ ವಿತರಣೆ

Suddi Udaya
error: Content is protected !!