23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಅರಳಿ ಪ್ರದೇಶಕ್ಕೆ ಅನುಕೂಲವಾಗುವಂತೆ ರಸ್ತೆ ನಿರ್ಮಿಸಲು ಆಗ್ರಹ

ಉಜಿರೆಯ ರೋಟರಿ ಭವನದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನ್ಯೂನತೆ ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ರಸ್ತೆ ನಿರ್ಮಾಣಗೊಳಿಸುವ ಕುರಿತು ಫೆ.2ರಂದು ಸಭೆ ಜರುಗಿತು.

ಕಾಶಿಬೆಟ್ಟಿನ ಅರಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯ ಎರಡು ಕಡೆ ಇರುವ ಸಂಪರ್ಕ ರಸ್ತೆಯನ್ನು ಪಾದಾಚಾರಿಗಳಿಗೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಿಸಬೇಕು.ಕಾಶಿಬೆಟ್ಟಿನಲ್ಲಿ ಬಸ್ ತಂಗುದಾಣ ಈಗಿನಂತೆ ಇರಬೇಕು. ಹೆದ್ದಾರಿಯಿಂದ ಅರಳಿಯ ಜಿಲ್ಲಾ ಪಂಚಾಯಿತಿ ರಸ್ತೆ ಸಂಪರ್ಕ ಮಾಡುವ ಸರ್ವಿಸ್ ರಸ್ತೆ ವ್ಯವಸ್ಥಿತವಾಗಿ ನಿರ್ಮಿಸಬೇಕು ಎಂಬ ವಿಚಾರಗಳ ಕುರಿತು ಚರ್ಚಿಸಲಾಯಿತು.


ಈ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ, ಶಾಸಕ ಹರೀಶ್ ಪೂಂಜ,ಎಂಎಲ್ ಸಿ ಪ್ರತಾಪ್ ಸಿಂಹ ನಾಯಕ್, ಸಂಸದ ಬ್ರಿಜೇಶ್ ಚೌಟ, ಕೇಂದ್ರ ಸಚಿವ ನಿತಿನ್ ಗಡ್ಕರಿ ಉಜಿರೆ ಹಾಗೂ ಲಾಯಿಲ ಗ್ರಾಪಂಗಳಿಗೆ ಮನವಿ ನೀಡುವ ಕುರಿತು ನಿರ್ಣಯಿಸಲಾಯಿತು.

ಸಮಸ್ಯೆಗೆ ಸೂಕ್ತ ಪರಿಹಾರ ದೊರಕದೆ ಇದ್ದರೆ, ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು, ಕಾನೂನು ಹೋರಾಟ ಮಾಡಲು ಅರಳಿಯ ನಿವಾಸಿಗಳಿಗೆ ರೋಟರಿ ಕ್ಲಬ್ ವತಿಯಿಂದ ಸಹಕಾರ ನೀಡುವ ಬಗ್ಗೆ ಪ್ರಸ್ತಾಪಿಸಲಾಯಿತು.
ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು, ಕಾರ್ಯದರ್ಶಿ ಡಾ.ಎಂ.ಎಂ.ದಯಾಕರ್, ಪೂರ್ವಾಧ್ಯಕ್ಷರಾದ ಮನೋರಮಾ ಭಟ್, ಶ್ರೀಕಾಂತ ಕಾಮತ್, ಜಯರಾಮ್, ಪಂಚಾಯಿತಿ ಸದಸ್ಯ ಜಗನ್ನಾಥ ರೈ, ಸ್ಥಳೀಯರಾದ ಶ್ರೀಕಾಂತ ಕಾಮತ್, ಸುರೇಶ್, ಮೋಹಿನಿ, ಭಾಗ್ಯಜ್ಯೋತಿ, ಪ್ರಮೀಳಾ, ಕೃಷ್ಣ, ವಿಜಯ, ಜಯಾನಂದ, ಗಿರೀಶ್, ರವಿಕುಮಾರ್, ವಿನಯ ಕೃಷ್ಣ,ಶಿಲ್ಪಾ, ಅಜಯ್, ಭಾಗೀರಥಿ, ಸುಧಾಕರ್, ಸೃಜನ್ ಮತ್ತಿತರರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.

Related posts

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!