25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅರಸಿನಮಕ್ಕಿ ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಅರಸಿನಮಕ್ಕಿ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವವು ಜ.31 ಮತ್ತು ಫೆ. 1ರಂದು ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಿತು.

ಜ.31ರಂದು ಬೆಳಿಗ್ಗೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಚಂಡಿಕಾ ಹೋಮದ ಪೂರ್ಣಾಹುತಿ , ಮಹಾಪೂಜೆ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ರಂಗಪೂಜೆ ನಡೆಯಿತು.


ಫೆ.1 ರಂದು ಬೆಳಿಗ್ಗೆ ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ, ಮಹಾಪೂಜೆ
ದರ್ಶನ ಬಲಿ, ನಂತರ ಬಟ್ಟಲು ಕಾಣಿಕೆ , , ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ ಮಂತ್ರಾಕ್ಷತೆ ನಡೆಯಿತು. ಸಾಯಂಕಾಲ ಊರವರಿಂದ ಹಾಗೂ ಸ್ಥಳೀಯ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಶ್ರೀ ದುರ್ಗಾ ಫ್ರೆಂಡ್ಸ್ ಬೂಡುಮುಗೇರು ಇವರ ಪ್ರಾಯೋಜಕತ್ವದಲ್ಲಿ ಪೆರ್ಮೆದ ಕಲಾವಿದೆರ್ ಚೇಳ್ಳಾರು ಇವರು ಅಭಿನಯಿಸುವ “ಎನ್ನಿಲೆಕ ಇಜ್ಜೆರ್” ತುಳು ಹಾಸ್ಯಮಯ ನಾಟಕ ಜರುಗಿತು.

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತ ಮೊಕ್ತೇಸರರು ರಾಜಗೋಪಾಲ ಯಂ. ಪಿ., ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಗಂಗಾಧರ ಕೆ. ಉಡ್ಯೇರೆ, ಉಪಾಧ್ಯಕ್ಷ ಪದ್ಮಯ್ಯ ಗೌಡ ಉಡ್ಯೇರೆ, ಕಾರ್ಯದರ್ಶಿ ಟಿ. ರವಿಚಂದ್ರ ರಾವ್ ಅಂಗಡಿತೋಟ, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ ಅರಸಿನಮಕ್ಕಿ, ಅರ್ಚಕರಾದ ರಾಮಕೃಷ್ಣ ರಾವ್, ಅರವಿಂದ ಭಿಡೆ ಹಾಗೂ ಸಮಿತಿ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸ.ಸಂಘದ-ಆಡಳಿತ ಮಂಡಳಿಗೆ ವಿಶೇಷ ಆಹ್ವಾನಿತ ಸದಸ್ಯರಾಗಿ ಹರೀಶ್ ರಾವ್ ಕಾಯಡ ಆಯ್ಕೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿಗೆ ಶಿಕ್ಷೆ ಪ್ರಕಟ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ 77 ನೇ ಗಣರಾಜ್ಯೋತ್ಸವ ದಿನಾಚರಣೆ

Suddi Udaya
error: Content is protected !!