23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ಸಹಭಾಗಿತ್ವದಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ’ ಪ್ರತಿಭಾ ಪ್ರದರ್ಶನ – 2025-26 ‘ ಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ರಾಷ್ಟ್ರ ಪ್ರೇಮವನ್ನು ಪ್ರತಿಬಿಂಬಿಸುವ ವಿನೂತನವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಂಡ ತಂಡವಾಗಿ ಪ್ರದರ್ಶನ ಮಾಡಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ ವಿಶ್ವನಾಥ್ ಪಿ. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ, ಪಿಜಿ ಕೇಂದ್ರದ ಡೀನ್ ಸೌಮ್ಯ, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯ್ಕ್ ಹಾಗು ಐಕ್ಯುಎಸಿ ಸಂಯೋಜಕ ಗಜಾನನ ಭಟ್, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ತೀರ್ಪುಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸೌಖ್ಯ ಎಸ್.ಜೈನ್ ನಿರೂಪಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ವಂದಿಸಿದರು.

Related posts

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ವಾಗ್ಮಿ ದಾಮೋದರ ಶರ್ಮ ಸಂವಾದ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

Suddi Udaya
error: Content is protected !!