July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಎರಡು ದಿನಗಳ ‘ಪ್ರತಿಭಾ ಪ್ರದರ್ಶನಕ್ಕೆ ಚಾಲನೆ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಾರ್ಷಿಕೋತ್ಸವದ ಪ್ರಯುಕ್ತ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿ ಸಹಭಾಗಿತ್ವದಲ್ಲಿ ಪದವಿ ಮತ್ತು ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಗೆ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಆಯೋಜಿಸಿದ್ದ ಎರಡು ದಿನಗಳ’ ಪ್ರತಿಭಾ ಪ್ರದರ್ಶನ – 2025-26 ‘ ಗೆ ಚಾಲನೆ ನೀಡಲಾಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ರಾಷ್ಟ್ರ ಪ್ರೇಮವನ್ನು ಪ್ರತಿಬಿಂಬಿಸುವ ವಿನೂತನವಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಂಡ ತಂಡವಾಗಿ ಪ್ರದರ್ಶನ ಮಾಡಿದರು.

ಕಾಲೇಜಿನ ಪ್ರಾಚಾರ್ಯರಾದ ಪ್ರೊ ವಿಶ್ವನಾಥ್ ಪಿ. ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ನಂದ ಕುಮಾರಿ, ಪಿಜಿ ಕೇಂದ್ರದ ಡೀನ್ ಸೌಮ್ಯ, ಪರೀಕ್ಷಾಂಗ ಕುಲಸಚಿವ ಗಣೇಶ್ ನಾಯ್ಕ್ ಹಾಗು ಐಕ್ಯುಎಸಿ ಸಂಯೋಜಕ ಗಜಾನನ ಭಟ್, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ಉಪಸ್ಥಿತರಿದ್ದರು.

ಉದ್ಘಾಟನಾ ಸಮಾರಂಭದಲ್ಲಿ ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿವರ್ಗದವರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ತೀರ್ಪುಗಾರರು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಸೌಖ್ಯ ಎಸ್.ಜೈನ್ ನಿರೂಪಿಸಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಅಧ್ಯಕ್ಷ ಡಾ. ನಾಗಣ್ಣ ವಂದಿಸಿದರು.

Related posts

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡ ಜಿಲ್ಲಾ ಮಟ್ಟಕ್ಕೆ

Suddi Udaya

ವೇಣೂರು: ಬಜಿರೆ “ಸುರಭಿ” ಮನೆಯ ಬಿ. ರತ್ನವರ್ಮ ಇಂದ್ರ ನಿಧನ

Suddi Udaya

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya
error: Content is protected !!