22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ “ವನ್ ಮಿನಿಟ್ ಉಮಾ”ರಿಂದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ಧಾರಿ ಖ್ಯಾತ ಬ್ಯೂಟೀಶಿಯನ್ ಶ್ರೀಮತಿ ಉಮಾ ಜಯಕುಮಾರ್ (ವನ್ ಮಿನಿಟ್ ಉಮಾ) ಇವರಿಂದ ಒಂದು ದಿನದ ವಿಶೇಷ ಬ್ಯೂಟೀಶಿಯನ್ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮವನ್ನು ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್. ಜರ್ನಾದನ್ ಉದ್ಘಾಟಿಸಿ, ಕೌಶಲ್ಯಾಧಾರಿತ ತರಬೇತಿಗಳು ಸ್ವ ಉದ್ಯೋಗಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಶ್ರೀಮತಿ ಉಮಾ ಜಯಕುಮಾರ್ ಅವರು ಬ್ಯೂಟೀಶಿಯನ್ ವೃತ್ತಿಯಲ್ಲಿ ತಾಂತ್ರಿಕ ನೈಪುಣ್ಯ, ಸಮಯ ನಿರ್ವಹಣೆ ಹಾಗೂ ಗ್ರಾಹಕ ತೃಪ್ತಿಯ ಮಹತ್ವದ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರುಡ್ ಸೆಟ್ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯಕುಮಾರ್ ವಹಿಸಿ ಮಾತನಾಡಿ, ಗ್ರಾಮೀಣ ಯುವಜನತೆಗೆ ಕೌಶಲ್ಯ ತರಬೇತಿ ನೀಡುವಲ್ಲಿ ರುಡ್ ಸೆಟ್ ಸಂಸ್ಥೆಯ ಪಾತ್ರವನ್ನು ವಿವರಿಸಿದರು.


ವೇದಿಕೆಯಲ್ಲಿ ಅತಿಥಿ ಉಪನ್ಯಾಸಕಿಯಾದ ಮಾಧವಿ ರೈ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರುಡ್ ಸೆಟ್ ಸಂಸ್ಥೆಯ ಕೇಂದ್ರ ಕಚೇರಿಯ ಹಿರಿಯ ಉಪನ್ಯಾಸಕಿ ಅನಸೂಯಾ, ಉಪನ್ಯಾಸಕರಾದ ಲೋಹಿತ್ ಜೈನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಾಗಾರದಲ್ಲಿ ರುಡ್ ಸೆಟ್ ಸಂಸ್ಥೆಯ ಬ್ಯೂಟೀಶಿಯನ್ ತರಬೇತಿ ಪಡೆದ ಹಳೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಪ್ರಾರ್ಥನೆಯನ್ನು ಶ್ರೀಮತಿ ಸೀತಾ ಹೆಗಡೆ ಹಾಗೂ ಶ್ರೀಮತಿ ಲಕ್ಷ್ಮಿ ಸಲ್ಲಿಸಿದರು. ಉಜಿರೆ ರುಡ್ ಸೆಟ್ ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮದ ನಿರೂಪಿಸಿದರು. ಹಿರಿಯ ಉಪನ್ಯಾಸಕ ಕೆ. ಕರುಣಾಕರ ಜೈನ್ ಧನ್ಯವಾದವಿತ್ತರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ರಕ್ತೇಶ್ವರಿ ಗುಡಿ, ಶ್ರೀ ನಾಗದೇವರ ಕಟ್ಟೆ, ಹಾಗೂ ಶ್ರೀ ಪಂಜುರ್ಲಿ ದೈವದ ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಓದಿನ ಕೌಶಲ್ಯ, ಪರೀಕ್ಷೆಗಾಗಿ ಅಧ್ಯಯನ ಸಲಹೆಗಳು, ಸಮಯ ನಿರ್ವಹಣೆ ಮತ್ತು ತಯಾರಿ ಕುರಿತ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಕಾಮಧೇನು ಸಂಘದ ಸದಸ್ಯರಿಂದ ಆಟಿಡೊಂಜಿ ದಿನ

Suddi Udaya
error: Content is protected !!