26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೃಷಿಕರ ವಿರೋಧಿ, ಪರಿಶಿಷ್ಟ ವರ್ಗ ಕಡೆಗಣಿಸಿದ ಬಜೆಟ್ – ಜಿಲ್ಲಾ ಕೆ ಡಿ ಪಿ ಸದಸ್ಯ ನ್ಯಾಯವಾದಿ ಸಂತೋಷ್ ಕುಮಾರ್

ಬೆಳ್ತಂಗಡಿ: ಯುವಕರಿಗೆ ಉದ್ಯೋಗ, ಕೃಷಿಕರಿಗೆ ಅನುಕೂಲ, ಗ್ರಾಮೀಣ ಪ್ರದೇಶಕ್ಕೆ ಸೌಲಭ್ಯ ನೀಡುವ ರೀತಿ ಬಜೆಟ್ ಇರಬಹುದು ಎಂದು ನಿರೀಕ್ಷಿಸಲಾಗಿತ್ತು, ಆದರೆ ಯಾರೂ ಊಹಿಸದ ರೀತಿಯಲ್ಲಿ ಕಳಪೆ ಮಟ್ಟದಲ್ಲಿ ಬಜೆಟ್ ಮಂಡಿಸಲಾಗಿದೆ.

ಕೇಂದ್ರದ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ದಕ್ಷಿಣ ಭಾರತವನ್ನು ಅದರಲ್ಲೂ ಕರ್ನಾಟಕವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಮುಖ್ಯವಾಗಿ ಕೃಷಿಗೆ ಕಳೆದ ಬಾರಿಗಿಂತಲೂ ಕಡಿಮೆ ಬಜೆಟ್ ನಿಗದಿ‌ಮಾಡಿ ಅನ್ಯಾಯ ಮಾಡಿದೆ. ಯೂರಿಯಾ ಸಬ್ಸಿಡಿ ಕಡಿತ ಮಾಡಿ ರೈತರಿಗೆ ಅನ್ಯಾಯ ಮಾಡಲಾಗಿದೆ. ಕಳೆದ ಬಾರಿ 1.70 ಲಕ್ಷಕೋಟಿ ರೂ. ಕೃಷಿಗೆ ನೀಡಲಾಗಿತ್ತು, ಈ ಬಾರಿ 1.62 ಲಕ್ಷ ಕೋಟಿ ರೂ. ನಿಗದಿ ಮಾಡಿದೆ. ಹೀಗಾದಲ್ಲಿ ಕೃಷಿಕರು ಬದುಕುವುದು ಹೇಗೆ‌. ಶ್ರೀಮಂತ ವರ್ಗದ ಓಲೈಕೆ ಮಾಡುವ ಭರದಲ್ಲಿ ದುಡಿಯುವ ವರ್ಗವನ್ನು ನಿರ್ಲಕ್ಷಿಸಲಾಗಿದೆ. ಇದೀಗ ಹವಾಮಾನ ‌ವಿಪರೀತ ಬದಲಾಗುತ್ತಿದ್ದು, ಕೃಷಿಕರು ಬೆಳೆ ಉಳಿಸಿಕೊಳ್ಳಲು ಪರದಾಡುತ್ತಿದ್ದಾರೆ, ಇಂತಹ ಸಂದರ್ಭದಲ್ಲೂ ಬೆಳೆ ವಿಮೆಯನ್ನು ಹೆಚ್ಚು ಮಾಡಿಲ್ಲ.

ಇನ್ನು ಪರಿಶಿಷ್ಟ ಜಾತಿ, ಪಂಗಡಗಳು ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕೆ ಯಾವುದೇ ಆದ್ಯತೆ ನೀಡಿಲ್ಲ. ಇವುಗಳಲ್ಲಿ ತಾರತಮ್ಯ ನೀತಿ ಹಾಗೂ ಈ ವರ್ಗವನ್ನು ನಿರ್ಲಕ್ಷ್ಯ ಧೋರಣೆಯನ್ನು ಕೇಂದ್ರ ಅನುಸರಿಸಿದೆ. ಕೇಂದ್ರ ಬಜೆಟ್‌ನಲ್ಲಿ ರಾಜ್ಯ ಸರಕಾರಕ್ಕೆ ನೀಡಬೇಕಾಗಿದ್ದ ತೆರಿಗೆ ಪಾಲಿನ ಹಣವನ್ನು ಸರಿಯಾಗಿ ನೀಡಿಲ್ಲ. ಕೇಂದ್ರ ಸರಕಾರಕ್ಕೆ ಬೇಕಾದ ದೊಡ್ಡ ಉದ್ಯಮಿಗಳಿಗೆ ಮತ್ತು ತೆರಿಗೆ ಕಳ್ಳರಿಗೆ ಹೆಚ್ಚಿನ ರಿಯಾಯಿತಿ ಮತ್ತು ಸೌಲಭ್ಯ ಕಲ್ಪಿಸಿದೆ. ಈ ಬಾರಿಯ ಬಜೆಟ್ ಸಾಮಾನ್ಯ ಜನರ ಜೀವನದಲ್ಲಿ ತಲ್ಲಣ ಸೃಷ್ಟಿಸಿದೆ.

Related posts

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಶಾಖಾ ಮಠ ನಿರ್ಮಾಣ: ಸಮಿತಿಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಂದ ವೀಕ್ಷಣೆ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya
error: Content is protected !!