23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ ಸೇವೆ, ಹಸಿರುವಾಣಿ ಸಮರ್ಪಣೆ , ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ ‘ ನಡೆಯಿತು. ಸಂಜೆ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರ ಪಾಣಿ ರಾಧಾಕೃಷ್ಣ ಯಡಪಡಿತ್ತಾಯ , ಗೌರವ ಸಲಹೆಗಾರ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್ ಹಾರ, ಸದಸ್ಯರಾದ ಶಶಿ ಪುತ್ಯೆಮಜಲು, ಸುರೇಶ ಪಡಿಪಂಡ, ಜಯರಾಮ ನ್ಯೂ ಆರಿಗ, ಜಯಾನಂದ ಬಂಟ್ರಿಯಾಲ್, ದಾಮೋದರ ನ್ಯೂ ಆರಿಗ, ಜಯಂತಿ ಹಾರ, ಕುಸುಮ ಪೊಯ್ಯೊಳೆ, ಗಣೇಶ ಹಾರ, ಮೋನಪ್ಪ ಗೌಡ ಕೆಂಪಮುದೇಲು, ನಾಗೇಶ್ ಹಾರ, ದಾಮೋದರ ಮಡ್ಯಲಗುಂಡಿ, ಗಣೇಶ್ ಕಲಾಯಿ, ಮುತ್ತಪ್ಪ ಡೆಂಜ, ವಾಸುದೇವ ಮಂಡೆಕರ, ಬಾಬು ಪುತ್ಯೆಮಜಲು, ಶೇಖರ ಪೂಜಾರಿ, ಗೌರವ್ ಹೊಸಮಜಲು,
ದೈವದ ಪರಿಚಾರಕರಾದ ನೇಮಣ್ಣ ಗೌಡ, ದಾಮೋದರ ಪೂಜಾರಿ, ಹೊನ್ನಪ್ಪ ಗೌಡ , ಸುಂದರ ಗೌಡ , ಶೀನಪ್ಪ ಗೌಡ, ಆನಂದ ಗೌಡ , ವೆಂಕಟರಮಣ, ಮಾಯಿಲ ವಿಭಾಗದವರು, ಗುರುವ, ಹಾರ, ಮುಂಡ, ಪೊಯ್ಯೊಳೆ ಊರಿನ ಹತ್ತು ಸಮಸ್ತರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಎಸ್.ಡಿ.ಎಂ. ವಸತಿ ಪಪೂ ಕಾಲೇಜಿನ ‘ಸ್ಮೃತಿ’ ದ್ವೈ ವಾರ್ಷಿಕ ಸಂಚಿಕೆ ಬಿಡುಗಡೆ

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya
error: Content is protected !!