September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವ

ಕೊಕ್ಕಡ ಮಾಯಿಲಕೋಟೆ ಸೀಮೆ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.30 ರಂದು ಕ್ಷೇತ್ರದ ತಂತ್ರಿಗಳಾದ ಶ್ರೀ ಬ್ರಹ್ಮಶ್ರೀ ಕೆ. ಯು. ಪದ್ಮನಾಭ ತಂತ್ರಿಗಳು ಎಡಮನೆ ನೀಲೆಶ್ವರ ಇವರ ಮಾರ್ಗದರ್ಶನದಲ್ಲಿ ವೈದಿಕ ವಿಧಿವಿಧಾನಗಳು ನಡೆಯಿತು.

ಬೆಳಿಗ್ಗೆ ಗಣಹೋಮ, ಕಲಶ ಪೂಜೆ, ನಾಗ ತಂಬಿಲ, ದೈವಗಳಿಗೆ ತಂಬಿಲ ಸೇವೆ, ಹಸಿರುವಾಣಿ ಸಮರ್ಪಣೆ , ಹಿರಣ್ಮಯಿ ಮಹಿಳಾ ಯಕ್ಷಗಾನ ಕಲಾಸಂಘ ನೆಲ್ಯಾಡಿ ಇವರಿಂದ ಯಕ್ಷಗಾನ ತಾಳಮದ್ದಳೆ ‘ ನಡೆಯಿತು. ಸಂಜೆ ಶ್ರೀ ಕಲ್ಲುರ್ಟಿ, ಶ್ರೀ ವರ್ಣಾರ ಪಂಜುರ್ಲಿ, ಶ್ರೀ ಕೋಟೆ ಚಾಮುಂಡಿ ಮತ್ತು ಶ್ರೀ ಗುಳಿಗ ದೈವಗಳ ನೇಮೋತ್ಸವ ಜರುಗಿತು.

ಈ ಸಂದರ್ಭದಲ್ಲಿ ಶ್ರೀ ವೈದ್ಯನಾಥೇಶ್ವರ ದೇವಸ್ಥಾನದ ಪವಿತ್ರ ಪಾಣಿ ರಾಧಾಕೃಷ್ಣ ಯಡಪಡಿತ್ತಾಯ , ಗೌರವ ಸಲಹೆಗಾರ ಕುಶಾಲಪ್ಪ ಗೌಡ ಪೂವಾಜೆ, ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ ದೇವಾಡಿಗ, ಕಾರ್ಯದರ್ಶಿ ಜಯಪ್ರಕಾಶ್ ಹಾರ, ಸದಸ್ಯರಾದ ಶಶಿ ಪುತ್ಯೆಮಜಲು, ಸುರೇಶ ಪಡಿಪಂಡ, ಜಯರಾಮ ನ್ಯೂ ಆರಿಗ, ಜಯಾನಂದ ಬಂಟ್ರಿಯಾಲ್, ದಾಮೋದರ ನ್ಯೂ ಆರಿಗ, ಜಯಂತಿ ಹಾರ, ಕುಸುಮ ಪೊಯ್ಯೊಳೆ, ಗಣೇಶ ಹಾರ, ಮೋನಪ್ಪ ಗೌಡ ಕೆಂಪಮುದೇಲು, ನಾಗೇಶ್ ಹಾರ, ದಾಮೋದರ ಮಡ್ಯಲಗುಂಡಿ, ಗಣೇಶ್ ಕಲಾಯಿ, ಮುತ್ತಪ್ಪ ಡೆಂಜ, ವಾಸುದೇವ ಮಂಡೆಕರ, ಬಾಬು ಪುತ್ಯೆಮಜಲು, ಶೇಖರ ಪೂಜಾರಿ, ಗೌರವ್ ಹೊಸಮಜಲು,
ದೈವದ ಪರಿಚಾರಕರಾದ ನೇಮಣ್ಣ ಗೌಡ, ದಾಮೋದರ ಪೂಜಾರಿ, ಹೊನ್ನಪ್ಪ ಗೌಡ , ಸುಂದರ ಗೌಡ , ಶೀನಪ್ಪ ಗೌಡ, ಆನಂದ ಗೌಡ , ವೆಂಕಟರಮಣ, ಮಾಯಿಲ ವಿಭಾಗದವರು, ಗುರುವ, ಹಾರ, ಮುಂಡ, ಪೊಯ್ಯೊಳೆ ಊರಿನ ಹತ್ತು ಸಮಸ್ತರು, ಸೀಮೆಯ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳ ರ‍್ಯಾಂಕ್ ಸಾಧನೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಗಣಪತಿ ಗುಡಿಯ ಹಾಗೂ ಪಿಲಿಚಂಡಿ ದೈವದ ದಾರಂದ ಮುಹೂರ್ತ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಹೆತ್ತವರ ಸಭೆ

Suddi Udaya
error: Content is protected !!