37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

ಚಾರ್ಮಾಡಿ : ಜಿಲ್ಲಾ ಕೃಷಿ ತರಬೇತಿ ಕೇಂದ್ರ ಕೃಷಿ ಇಲಾಖೆ ಬೆಳ್ತಂಗಡಿ, ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ)ಚಾರ್ಮಾಡಿ ಮತ್ತು ಗ್ರಾಮ ಪಂಚಾಯತ್ ಚಾರ್ಮಾಡಿ ಇದರ ಸಹಭಾಗಿತ್ವದಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಗಾರವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ ಅಧ್ಯಕ್ಷೆ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ವಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ವಿದ್ಯುಕ್ತ ಚಾಲನೆಯನ್ನು ನೀಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದಂತ ಪಶು ವೈದ್ಯಾಧಿಕಾರಿ ಧರ್ಮಸ್ಥಳ ವಲಯ ಡಾ. ಯತೀಶ್ ಮೊಟ್ಟೆ ಕೋಳಿ ಸಾಕಾಣಿಕೆ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು.
ಮೊಟ್ಟೆ ಕೋಳಿ ಸಾಕಾಣಿಕೆಯನ್ನು ಮಾಡುತ್ತಿರುವ ಬಿಜು ತಮ್ಮ ಅನುಭವದೊಂದಿಗೆ ಮಾಹಿತಿಯನ್ನು ನೀಡಿದರು.
ತರಬೇತಿ ಕಾರ್ಯಗಾರದಲ್ಲಿ ಗಣೇಶ ಆಡಿಗ ಕೃಷಿ ಅಧಿಕಾರಿ ಬೆಳ್ತಂಗಡಿ ಇವರು ಮಾತನಾಡಿ ಕೃಷಿ ಇಲಾಖೆಯಲ್ಲಿ ದೊರೆಯುವಂತಹ ತರಬೇತಿಯನ್ನು ಪಡೆದುಕೊಂಡು ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆಯನ್ನು ನೀಡಿದರು.
ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಂಜೀವಿನಿ ಅಭಿಯಾನ ನಿರ್ವಹಣ ಘಟಕ ತಾಲೂಕು ಪಂಚಾಯತ್ ಬೆಳ್ತಂಗಡಿ ಇದರ ಕಾರ್ಯಕ್ರಮ ವ್ಯವಸ್ಥಾಪಕಿಯಾದ ಪ್ರತಿಮಾ, ಕೃಷಿ ಮ್ಯಾನೇಜರ್ ಬಂಗಾರಪ್ಪ, ವಲಯ ಮೇಲ್ವಿಚಾರಕ ಜಯಾನಂದ್ ಉಪಸಿತರಿದ್ದರು.

ಕಾರ್ಯಕ್ರಮದಲ್ಲಿ ಚಾರ್ಮಾಡಿ ಮತ್ತು ಇತರ ಗ್ರಾಮಗಳಿಂದ ಆಗಮಿಸಿದ ಸ್ವ ಸಹಾಯ ಸಂಘದ ಸದಸ್ಯರು, ರೈತರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು. ಕಾರ್ಯಕ್ರಮವನ್ನು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಸಂಘಟಿಸಿ, ಎಂಬಿಕೆ ಕಾರ್ಯಕ್ರಮ ನಿರೂಪಿಸಿ, ಕೃಷಿ ಸಖಿ ಧನ್ಯವಾದವಿತ್ತರು

Related posts

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯದ ವ್ಯಸನದ ವಿರುದ್ದ ಜನಜಾಗೃತಿ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಬೈ ಶಾರದೋತ್ಸವದ ಶೋಭಾಯಾತ್ರೆ: ಕುಣಿತ ಭಜನೆ, ಜಡೆ ಕೋಲಾಟ, ಕಂಸಾಳೆ ಪ್ರದರ್ಶನ ನೀಡಲು ವಿ ಹರೀಶ್ ನೆರಿಯ ಸಾರಥ್ಯದಲ್ಲಿ ಭಕ್ತಿ ಹೆಜ್ಜೆ ಬಳಗ ಬೆಳ್ತಂಗಡಿಯ ಭಜಕರು

Suddi Udaya
error: Content is protected !!