September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಬಳ್ಳಮಂಜದಲ್ಲಿ ಶ್ರೀ ಈಶ್ವರ ದೇವರ ಬ್ರಹ್ಮಕಲಶದ ಪೂರ್ವಭಾವಿ ಸಭೆಯು ಜ.31ರಂದು ಶ್ರೀ ಕ್ಷೇತ್ರ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯಿತು.

ಮಾ.29ರಿಂದ ಎ.6 ರ ವರೆಗೆ ಪರ್ಯಂತ ಬಳ್ಳಮಂಜ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮ ಕಲಶದ ಪ್ರಯುಕ್ತ ದೇವಸ್ಥಾನದ ವತಿಯಿಂದ ರಚಿಸಿದ ಸಮಿತಿಯ ಸಭೆಯ ಅಧ್ಯಕ್ಷ ವಸಂತ ಗೌಡ ಮರಕಡ, ಗುತ್ತಿನ ಮನೆಯವರು ಊರ ಗಣ್ಯರು ಸಮಿತಿಯ ಸದಸ್ಯರು ಶ್ರಮದಾನ ಮಾಡಿದ ಶ್ರಮಿಕರು ಹಾಗೂ ದೇವಸ್ಥಾನದ ಸಿಬಂದಿ ವರ್ಗದವರ ಉಪಸ್ಥಿತಿಯಲ್ಲಿ ನಡೆಯಿತು.

ಕ್ಷೇತ್ರದ ಅನುವಂಶಿಯ ಆಡಳಿತ ಮೊಕ್ತೇಸರರಾದ ಡಾ| ಹರ್ಷ ಸಂಪಿಗೆತ್ತಾಯ ಬ್ರಹ್ಮಕಲಶವನ್ನು ಮಾದರಿಯಾಗಿ ವಿಜೃಂಭಣೆಯಿಂದ ನಡೆಸುವ ಬಗ್ಗೆ ರೂಪು ರೇಷೆಗಳನ್ನು ವಿವರಿಸಿದರು. ಅಧ್ಯಕ್ಷರು ಉತ್ತಮ ರೀತಿಯಲ್ಲಿ ಬಳ್ಳಮಂಜ ಬ್ರಹ್ಮಕಲಶ ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರವನ್ನು ಕೋರಿದರು. ಸಭೆಯಲ್ಲಿ ಈವರೆಗೆ ದೇಣಿಗೆ ನೀಡಿದ ದಾನಿಗಳ ಹೆಸರು ಖರ್ಚು ವೆಚ್ಚಗಳ ಮಾಹಿತಿಯನ್ನು ನೀಡಲಾಯಿತು. ಕ್ಷೇತ್ರದ ಸಿಬ್ಬಂದಿಗಳಾದ ಬಾಲಕೃಷ್ಣ ಬಿ ಸ್ವಾಗತಿಸಿ, ಸುಧೀರ್ ಶೆಟ್ಟಿ ಕೋರಬೆಟ್ಟು ಧನ್ಯವಾದವಿತ್ತರು.

Related posts

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

Suddi Udaya

ನಾಳೆ(ಜು.8) ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya
error: Content is protected !!